ಹಾರ್ದಿಕ್ ಪಟೇಲ್ 
ದೇಶ

ಮೃತರ ಕುಟುಂಬಕ್ಕೆ 35 ಲಕ್ಷ ರೂ ಪರಿಹಾರ ನೀಡಲು ಹಾರ್ದಿಕ್ ಪಟೇಲ್ ಆಗ್ರಹ

ಗುಜರಾತ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಾರ್ದಿಕ್ ಪಟೇಲ್, ಪ್ರತಿಭಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 35 ಲಕ್ಷ ರೂಪಾಯಿ ಪರಿಹಾರ ನೀಡಲು ಒತ್ತಾಯಿಸಿದ್ದಾರೆ.

ಅಹಮದಾಬಾದ್: ಪಟೇಲ್ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ಗುಜರಾತ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಾರ್ದಿಕ್ ಪಟೇಲ್, ಪ್ರತಿಭಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 35 ಲಕ್ಷ ರೂಪಾಯಿ ಪರಿಹಾರ ನೀಡಲು ಒತ್ತಾಯಿಸಿದ್ದಾರೆ.

ಪ್ರತಿಭಟನೆಯನ್ನು ತಿವ್ರಗೊಳಿಸುವುದಕ್ಕೆ ಸಿದ್ಧತೆ ನಡೆಸಿರುವ ಹಾರ್ದಿಕ್ ಪಟೇಲ್, ತನ್ನ ಸಮುದಾಯದ ರೈತರಿಗೆ ಅಗತ್ಯ ಸಾಮಗ್ರಿಗಳನ್ನು ಪೂರೈಕೆ ಮಾಡದಂತೆ ಕರೆ ನೀಡಿದ್ದಾರೆ. ಅಷ್ಟೇ ಅಲ್ಲದೇ, ಪಟೇಲ್ ಸಮುದಾಯದ ಮೇಲೆ ಹಲ್ಲೆ ನಡೆಸಿರುವ ಪೊಲೀಸ್ ರನ್ನು ಅಮಾನತುಗೊಳಿಸಬೇಕು, ಆ ನಂತರ ಪ್ರತಿಭಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 35 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕೆಂದು ಹಾರ್ದಿಕ್ ಪಟೇಲ್ ಒತ್ತಾಯಿಸಿದ್ದಾರೆ.

ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಸರ್ಕಾರ, ಪೊಲೀಸರು ಹಾಗೂ ಕೆಲ ಸಮಾಜ ವಿರೋಧಿಗಳೇ ಕಾರಣ, 55 ದಿನಗಳವರೆಗೆ ಪ್ರತಿಭಟನೆ ಶಾಂತವಾಗಿಯೇ ಮುಂದುವರೆದಿತ್ತು. ಆದರೆ ಜಿಎಂಡಿಸಿ ಮೈದಾನದಲ್ಲಿ ಪಟೇಲ್ ಸಮುದಾಯದ 20 ಲಕ್ಷಕ್ಕೂ ಹೆಚ್ಚು ಜನರು ಸೇರಿದಾಗ ಹಿಂಸಾಚಾರಕ್ಕೆ ರಾಜ್ಯ ಸರ್ಕಾರವೇ ಪ್ರಚೋದನೆ ನೀಡಿದೆ ಎಂದು ಹಾರ್ದಿಕ್ ಪಟೇಲ್ ಆರೋಪಿಸಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ