ಒಆರ್ ಒಪಿ ಪ್ರತಿಭಟನೆ: 
ದೇಶ

ಒಆರ್ ಒಪಿ ಪ್ರತಿಭಟನೆ: ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಲಿರುವ ನಿವೃತ್ತ ಸೈನಿಕರು

ಪ್ರತಿಭಟನಾ ನಿರತ ನಿವೃತ್ತ ಸೈನಿಕರು ಈಗ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಲು ನಿರ್ಧರ್ಸಿದ್ದಾರೆ.

ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್(ಒಆರ್ ಒಪಿ)ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆಗೆ ನಿರಾಕರಿಸಿದ್ದ ಪ್ರತಿಭಟನಾ ನಿರತ ನಿವೃತ್ತ ಸೈನಿಕರು ಈಗ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಲು ನಿರ್ಧರ್ಸಿದ್ದಾರೆ.

ಯೋಜನೆ ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ನೇತೃತ್ವ ವಹಿಸಿರುವ ನಿವೃತ್ತ ಸೈನಿಕರು ಇಂದು ರಾತ್ರಿ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಈ ಹಿಂದೆಯೂ ಹಲವು ಬಾರಿ ನಿವೃತ್ತ ಯೋಧರನ್ನು ಕೇಂದ್ರ ಸರ್ಕಾರ ಮಾತುಕತೆಗೆ ಆಹ್ವಾನಿಸಿತ್ತು.  ಆದರೆ ಪ್ರತಿಭಟನಾ ನಿರತರು ಮಾತ್ರ ತಿರಸ್ಕರಿಸಿದ್ದರು.

ಆಮರಣಾಂತ ಉಪವಾಸ ನಿಲ್ಲಿಸುವಂತೆ ಪ್ರಧಾನಿ ಕಾರ್ಯಾಲಯವೂ ಮನವಿ ಮಾಡಿತ್ತು. ಹಲವು ದಿನಗಳಿಂದ ನಿವೃತ್ತ ಯೋಧರು ಒ.ಆರ್.ಒ.ಪಿ ಗೆ ಆಗ್ರಹಿಸಿ ಆಮರಣಾಂತ ಉಪವಾಸ ಕೈಗೊಂಡಿದ್ದರು. ದೆಹಲಿಯ ಸೌತ್ ಬ್ಲಾಕ್ ನಲ್ಲಿರುವ ರಕ್ಷಣಾ ಸಚಿವರ ನಿವಾಸದಲ್ಲಿ ನಿವೃತ್ತ ಸೈನಿಕರ ಪ್ರತಿನಿಧಿ ಹಾಗೂ ರಕ್ಷಣಾ ಸಚಿವರು ಇಂದು ರಾತ್ರಿ ನಡೆಸಲಿರುವ ಮಾತುಕತೆ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT