ಒಆರ್ ಒಪಿ ಪ್ರತಿಭಟನೆ: 
ದೇಶ

ಒಆರ್ ಒಪಿ ಪ್ರತಿಭಟನೆ: ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಲಿರುವ ನಿವೃತ್ತ ಸೈನಿಕರು

ಪ್ರತಿಭಟನಾ ನಿರತ ನಿವೃತ್ತ ಸೈನಿಕರು ಈಗ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಲು ನಿರ್ಧರ್ಸಿದ್ದಾರೆ.

ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್(ಒಆರ್ ಒಪಿ)ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆಗೆ ನಿರಾಕರಿಸಿದ್ದ ಪ್ರತಿಭಟನಾ ನಿರತ ನಿವೃತ್ತ ಸೈನಿಕರು ಈಗ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಲು ನಿರ್ಧರ್ಸಿದ್ದಾರೆ.

ಯೋಜನೆ ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ನೇತೃತ್ವ ವಹಿಸಿರುವ ನಿವೃತ್ತ ಸೈನಿಕರು ಇಂದು ರಾತ್ರಿ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಈ ಹಿಂದೆಯೂ ಹಲವು ಬಾರಿ ನಿವೃತ್ತ ಯೋಧರನ್ನು ಕೇಂದ್ರ ಸರ್ಕಾರ ಮಾತುಕತೆಗೆ ಆಹ್ವಾನಿಸಿತ್ತು.  ಆದರೆ ಪ್ರತಿಭಟನಾ ನಿರತರು ಮಾತ್ರ ತಿರಸ್ಕರಿಸಿದ್ದರು.

ಆಮರಣಾಂತ ಉಪವಾಸ ನಿಲ್ಲಿಸುವಂತೆ ಪ್ರಧಾನಿ ಕಾರ್ಯಾಲಯವೂ ಮನವಿ ಮಾಡಿತ್ತು. ಹಲವು ದಿನಗಳಿಂದ ನಿವೃತ್ತ ಯೋಧರು ಒ.ಆರ್.ಒ.ಪಿ ಗೆ ಆಗ್ರಹಿಸಿ ಆಮರಣಾಂತ ಉಪವಾಸ ಕೈಗೊಂಡಿದ್ದರು. ದೆಹಲಿಯ ಸೌತ್ ಬ್ಲಾಕ್ ನಲ್ಲಿರುವ ರಕ್ಷಣಾ ಸಚಿವರ ನಿವಾಸದಲ್ಲಿ ನಿವೃತ್ತ ಸೈನಿಕರ ಪ್ರತಿನಿಧಿ ಹಾಗೂ ರಕ್ಷಣಾ ಸಚಿವರು ಇಂದು ರಾತ್ರಿ ನಡೆಸಲಿರುವ ಮಾತುಕತೆ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT