ಸಾಂದರ್ಭಿಕ ಚಿತ್ರ 
ದೇಶ

ಕೃಷ್ಣಾ ನ್ಯಾಯಾಧೀಕರಣ: ಸೆ.10ರೊಳಗೆ ಅಭಿಪ್ರಾಯ ತಿಳಿಸಿ; ಕೇಂದ್ರಕ್ಕೆ ಸುಪ್ರೀಂ ಆದೇಶ

ಕೃಷ್ಣಾ ನ್ಯಾಯಾಧಿಕರಣವು ನದಿ ನೀರು ಹಂಚಿಕೆ ಕುರಿತು ಮರುವಿಚಾರಣೆ ನಡೆಸಬೇಕೆಂಬ ತೆಲಂಗಾಣ ರಾಜ್ಯದ ಕೋರಿಕೆಗೆ...

ನವದೆಹಲಿ: ಕೃಷ್ಣಾ ನ್ಯಾಯಾಧಿಕರಣವು ನದಿ ನೀರು ಹಂಚಿಕೆ ಕುರಿತು ಮರುವಿಚಾರಣೆ ನಡೆಸಬೇಕೆಂಬ ತೆಲಂಗಾಣ ರಾಜ್ಯದ ಕೋರಿಕೆಗೆ ಸಂಬಂಧಿಸಿದಂತೆ ತನ್ನ ನಿಲವು ತಿಳಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ವಿಚಾರಣೆ ವೇಳೆ ನ್ಯಾಯಮೂರ್ತಿಗಳು, ಈಗಾಗಲೇ ನ್ಯಾಯಾಧಿಕರಣ ತೀರ್ಪು ನೀಡಿರುವುದರಿಂದ ಮರು ವಿಚಾರಣೆ ನಡೆಸಲು ಸಾಧ್ಯವೇ? ನ್ಯಾಯಾಧಿಕರಣ ಮರು ವಿಚಾರಣೆ ನಡೆಸಬೇಕು ಎಂದು ಆದೇಶ ಕೋರಿ ತೆಲಂಗಾಣ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಯೋಗ್ಯವೇ ಎಂಬುದರ ಬಗ್ಗೆಯೂ ನ್ಯಾ. ದೀಪಕ್ ಮಿಶ್ರಾ ಅನುಮಾನ ವ್ಯಕ್ತಪಡಿಸಿದರು.

ಸೆ.10ರೊಳಗೆ ಅಭಿಪ್ರಾಯ ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದರು. ಬುಧವಾರ ವಿಚಾರಣೆ ವೇಳೆ ತೆಲಂಗಾಣ ರಾಜ್ಯದ ವಕೀಲರು, ಕೃಷ್ಣಾ ನ್ಯಾಯಾಧಿಕರಣದಿಂದ ನಮಗೆ (ವಿಭಜನಾ ಪೂರ್ವ ಆಂಧ್ರಕ್ಕೆ) ಸರಿಯಾಗಿ ನೀರು ಹಂಚಿಕೆ ಮಾಡಿಲ್ಲ. ಈಗ ಹೊಸ ರಾಜ್ಯ ಉದಯಿಸಿರುವುದರಿಂದ ಮರು ಹಂಚಿಕೆ ಮಾಡಬೇಕು ಎಂದು ಕೋರಿದರು.

ಇದಕ್ಕೆ ನ್ಯಾಯಮೂರ್ತಿಗಳು ಸಮ್ಮತಿಸಲಿಲ್ಲ. ಆಂಧ್ರಕ್ಕೆ ಹಂಚಿಕೆ ಮಾಡಿರುವ ನೀರನ್ನು ಉಭಯ ರಾಜ್ಯಗಳು (ಆಂಧ್ರ-ತೆಲಂಗಾಣ) ಹಂಚಿಕೊಳ್ಳಬೇಕು, ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಹಂಚಿರುವ ನೀರಿನಲ್ಲಿ ಪಾಲು ಕೇಳುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಅಂತಾರಾಜ್ಯ ನದಿ ನೀರು ವಿವಾದ ಕಾಯ್ದೆ (1956) ಅನ್ವಯ ಮರು ವಿಚಾರಣೆಗೆ ಆದೇಶ ನೀಡಬೇಕು ಎಂದು ತೆಲಂಗಾಣ ರಾಜ್ಯದ ವಕೀಲರು ಮನವಿ ಮಾಡಿದರು.

ಈ ಮನವಿಗೆ ಕರ್ನಾಟಕ ಮತ್ತು ಹಾರಾಷ್ಟ್ರ ವಕೀಲರು ಆಕ್ಷೇಪಿಸಿದರು. ನ್ಯಾಯಾಧಿಕರಣ ಈಗಾಗಲೇ ತೀರ್ಪು ಪ್ರಕಟಿಸಿದೆ. ತೀರ್ಪು ಸರಿಯಾಗಿಯೇ ಇದೆ. ಒಂದು ಬಾರಿ ನ್ಯಾಯಾಧಿಕರಣಕ್ಕೆ ವಹಿಸಿದ ನಂತರ ಮತ್ತೆ ಆ ವಿಚಾರವನ್ನು ಸುಪ್ರೀಕೋರ್ಟ್‍ನಲ್ಲಿ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ಮಹಾರಾಷ್ಟ್ರ ಪರ ವಕೀಲರು ವಾದಿಸಿದರು.

ಇದೇ ವೇಳೆ, ಕೃಷ್ಣಾ ನ್ಯಾಯಾಧಿಕರಣದ ಅಧ್ಯಕ್ಷ ನ್ಯಾ. ದಿಲೀಪ್ ಕುಮಾರ್ ಸೇಠ್ ವೈಯಕ್ತಿಕ ಕಾರಣಗಳಿಗಾಗಿ ರಾಜಿನಾಮೆ ನೀಡಿದ್ದಾರೆ, ಆದ್ದರಿಂದ ನ್ಯಾಯಾಧಿಕರಣಕ್ಕೆ ತ್ವರಿತ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ತೆಲಂಗಾಣ ಪರ ವಕೀಲರು ಮನವಿ ಮಾಡಿಕೊಂಡರು. ಕೃಷ್ಣಾ ನ್ಯಾಯಾಧಿಕರಣವು ಈಗಾಗಲೇ ತನ್ನ ಐತೀರ್ಪು ಪ್ರಕಟಿಸಿ, ಸ್ಪಷ್ಟೀಕರಣ ಕೋರಿದ್ದ ಅರ್ಜಿಗಳನ್ನು ಇತ್ಯರ್ಥಪಡಿಸಿದೆ.

ಐತೀರ್ಪು ಹೊರ ಬಿದ್ದ ನಂತರ ಆಂಧ್ರ ವಿಭಜನೆ ಆಗಿರುವ ಹಿನ್ನೆಲೆಯಲ್ಲಿ ನೂತನ ತೆಲಂಗಾಣ ರಾಜ್ಯವು ಕೃಷ್ಣಾ ನದಿ ನೀರನ್ನು ಮರು ಹಂಚಿಕೆ ಕೋರಿ ಸುಪ್ರೀಂಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದೆ. ಕೃಷ್ಣಾ ನ್ಯಾಯಾಧಿಕರಣವು ಹೊಸದಾಗಿ ವಿಚಾರಣೆ ನಡೆಸಿ ನದಿ ನೀರನ್ನು ಮರು ಹಂಚಿಕೆ ಮಾಡಬೇಕು ಎಂಬುದು ತೆಲಂಗಾಣದ ಬೇಡಿಕೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT