ಪ್ರತಿಭಟನೆ ವೇಳೆ ಕಾರಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು (ಫೋಟೋ ಕೃಪೆ: ಪಿಟಿಐ) 
ದೇಶ

ಹಿಂಸಾಚಾರಕ್ಕೆ ತಿರುಗಿದ ಪಟೇಲ್ ಹೋರಾಟ: 3 ಕಡೆ ಕರ್ಫ್ಯೂ ಜಾರಿ

ಗುಜರಾತ್ ನ ಪ್ರಭಾವಿ ಪಟೇಲ್ ಸಮುದಾಯಕ್ಕೆ ಸರ್ಕಾರಿ ನೌಕರಿ ಹಾಗೂ ಶಾಲಾ, ಕಾಲೇಜುಗಳ ಪ್ರವೇಶದಲ್ಲಿ ಮೀಸಲಾತಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪಟೇಲ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ...

ಅಹ್ಮದಾಬಾದ್: ಗುಜರಾತ್  ನ ಪ್ರಭಾವಿ ಪಟೇಲ್ ಸಮುದಾಯಕ್ಕೆ ಸರ್ಕಾರಿ ನೌಕರಿ ಹಾಗೂ ಶಾಲಾ, ಕಾಲೇಜುಗಳ ಪ್ರವೇಶದಲ್ಲಿ ಮೀಸಲಾತಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪಟೇಲ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು 3 ಪ್ರದೇಶಗಳಲ್ಲಿ ಶುಕ್ರವಾರ ಕರ್ಫ್ಯೂ ಜಾರಿ ಮಾಡಿದ್ದಾರೆ.

ಗುಜರಾತ್ ನ ಪ್ರಭಾವಿ ಸಮುದಾಯವಾಗಿರುವ ಪಟೇಲ್ ಸಮುದಾಯವನ್ನು ಒಬಿಸಿ ವರ್ಗಕ್ಕೆ ಸೇರ್ಪಡೆ ಮಾಡಬೇಕೆಂದು ಕೋರಿ ಪಟೇಲ್ ಸಮುದಾಯದ ಜನತೆ ಆಗಸ್ಟ್ 25 ರಂದು ಪ್ರತಿಭಟನೆಗಿಳಿದಿತ್ತು. ಈ ಪ್ರತಿಭಟನೆಯು ಗುಜರಾತ್, ಅಹ್ಮದಾಬಾದ್ ಹಾಗೂ ಸೂರತ್ ನಲ್ಲಿಯೂ ನಡೆಯಿತು. ಆದರೆ, ದಿನಕಳೆಯುತ್ತಿದ್ದಂತೆ ಈ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆಯ ಪ್ರಮುಖ ರುವಾರಿಯಾಗಿದ್ದ ಹಾರ್ದಿಕ್ ಪಟೇಲ್ ಅವರನ್ನು ಬಂಧನಕ್ಕೊಳಪಡಿಸಿದ್ದರು.

ನಂತರ ಹಾರ್ದಿಕ್ ಪಟೇಲ್ ಅವರನ್ನು ಬಿಡುಗಡೆ ಮಾಡಿತ್ತು. ಆದರೆ, ಇದೀಗ ಪಟೇಲ್ ಸಮುದಾಯದ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಅಹ್ಮದಾಬಾದ್ ನ ಸುಮಾರು 3 ಪ್ರದೇಶಗಳಲ್ಲಿ ಅಧಿಕಾರಿಗಳು ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT