ಪ್ರತಿಭಟನೆ ವೇಳೆ ಕಾರಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು (ಫೋಟೋ ಕೃಪೆ: ಪಿಟಿಐ) 
ದೇಶ

ಹಿಂಸಾಚಾರಕ್ಕೆ ತಿರುಗಿದ ಪಟೇಲ್ ಹೋರಾಟ: 3 ಕಡೆ ಕರ್ಫ್ಯೂ ಜಾರಿ

ಗುಜರಾತ್ ನ ಪ್ರಭಾವಿ ಪಟೇಲ್ ಸಮುದಾಯಕ್ಕೆ ಸರ್ಕಾರಿ ನೌಕರಿ ಹಾಗೂ ಶಾಲಾ, ಕಾಲೇಜುಗಳ ಪ್ರವೇಶದಲ್ಲಿ ಮೀಸಲಾತಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪಟೇಲ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ...

ಅಹ್ಮದಾಬಾದ್: ಗುಜರಾತ್  ನ ಪ್ರಭಾವಿ ಪಟೇಲ್ ಸಮುದಾಯಕ್ಕೆ ಸರ್ಕಾರಿ ನೌಕರಿ ಹಾಗೂ ಶಾಲಾ, ಕಾಲೇಜುಗಳ ಪ್ರವೇಶದಲ್ಲಿ ಮೀಸಲಾತಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪಟೇಲ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು 3 ಪ್ರದೇಶಗಳಲ್ಲಿ ಶುಕ್ರವಾರ ಕರ್ಫ್ಯೂ ಜಾರಿ ಮಾಡಿದ್ದಾರೆ.

ಗುಜರಾತ್ ನ ಪ್ರಭಾವಿ ಸಮುದಾಯವಾಗಿರುವ ಪಟೇಲ್ ಸಮುದಾಯವನ್ನು ಒಬಿಸಿ ವರ್ಗಕ್ಕೆ ಸೇರ್ಪಡೆ ಮಾಡಬೇಕೆಂದು ಕೋರಿ ಪಟೇಲ್ ಸಮುದಾಯದ ಜನತೆ ಆಗಸ್ಟ್ 25 ರಂದು ಪ್ರತಿಭಟನೆಗಿಳಿದಿತ್ತು. ಈ ಪ್ರತಿಭಟನೆಯು ಗುಜರಾತ್, ಅಹ್ಮದಾಬಾದ್ ಹಾಗೂ ಸೂರತ್ ನಲ್ಲಿಯೂ ನಡೆಯಿತು. ಆದರೆ, ದಿನಕಳೆಯುತ್ತಿದ್ದಂತೆ ಈ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆಯ ಪ್ರಮುಖ ರುವಾರಿಯಾಗಿದ್ದ ಹಾರ್ದಿಕ್ ಪಟೇಲ್ ಅವರನ್ನು ಬಂಧನಕ್ಕೊಳಪಡಿಸಿದ್ದರು.

ನಂತರ ಹಾರ್ದಿಕ್ ಪಟೇಲ್ ಅವರನ್ನು ಬಿಡುಗಡೆ ಮಾಡಿತ್ತು. ಆದರೆ, ಇದೀಗ ಪಟೇಲ್ ಸಮುದಾಯದ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಅಹ್ಮದಾಬಾದ್ ನ ಸುಮಾರು 3 ಪ್ರದೇಶಗಳಲ್ಲಿ ಅಧಿಕಾರಿಗಳು ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT