ಪ್ರತಿಭಟನೆ ವೇಳೆ ಕಾರಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು (ಫೋಟೋ ಕೃಪೆ: ಪಿಟಿಐ) 
ದೇಶ

ಹಿಂಸಾಚಾರಕ್ಕೆ ತಿರುಗಿದ ಪಟೇಲ್ ಹೋರಾಟ: 3 ಕಡೆ ಕರ್ಫ್ಯೂ ಜಾರಿ

ಗುಜರಾತ್ ನ ಪ್ರಭಾವಿ ಪಟೇಲ್ ಸಮುದಾಯಕ್ಕೆ ಸರ್ಕಾರಿ ನೌಕರಿ ಹಾಗೂ ಶಾಲಾ, ಕಾಲೇಜುಗಳ ಪ್ರವೇಶದಲ್ಲಿ ಮೀಸಲಾತಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪಟೇಲ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ...

ಅಹ್ಮದಾಬಾದ್: ಗುಜರಾತ್  ನ ಪ್ರಭಾವಿ ಪಟೇಲ್ ಸಮುದಾಯಕ್ಕೆ ಸರ್ಕಾರಿ ನೌಕರಿ ಹಾಗೂ ಶಾಲಾ, ಕಾಲೇಜುಗಳ ಪ್ರವೇಶದಲ್ಲಿ ಮೀಸಲಾತಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪಟೇಲ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು 3 ಪ್ರದೇಶಗಳಲ್ಲಿ ಶುಕ್ರವಾರ ಕರ್ಫ್ಯೂ ಜಾರಿ ಮಾಡಿದ್ದಾರೆ.

ಗುಜರಾತ್ ನ ಪ್ರಭಾವಿ ಸಮುದಾಯವಾಗಿರುವ ಪಟೇಲ್ ಸಮುದಾಯವನ್ನು ಒಬಿಸಿ ವರ್ಗಕ್ಕೆ ಸೇರ್ಪಡೆ ಮಾಡಬೇಕೆಂದು ಕೋರಿ ಪಟೇಲ್ ಸಮುದಾಯದ ಜನತೆ ಆಗಸ್ಟ್ 25 ರಂದು ಪ್ರತಿಭಟನೆಗಿಳಿದಿತ್ತು. ಈ ಪ್ರತಿಭಟನೆಯು ಗುಜರಾತ್, ಅಹ್ಮದಾಬಾದ್ ಹಾಗೂ ಸೂರತ್ ನಲ್ಲಿಯೂ ನಡೆಯಿತು. ಆದರೆ, ದಿನಕಳೆಯುತ್ತಿದ್ದಂತೆ ಈ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆಯ ಪ್ರಮುಖ ರುವಾರಿಯಾಗಿದ್ದ ಹಾರ್ದಿಕ್ ಪಟೇಲ್ ಅವರನ್ನು ಬಂಧನಕ್ಕೊಳಪಡಿಸಿದ್ದರು.

ನಂತರ ಹಾರ್ದಿಕ್ ಪಟೇಲ್ ಅವರನ್ನು ಬಿಡುಗಡೆ ಮಾಡಿತ್ತು. ಆದರೆ, ಇದೀಗ ಪಟೇಲ್ ಸಮುದಾಯದ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಅಹ್ಮದಾಬಾದ್ ನ ಸುಮಾರು 3 ಪ್ರದೇಶಗಳಲ್ಲಿ ಅಧಿಕಾರಿಗಳು ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!