ಪ್ರತಿಭಟನಾ ನಿರತ ನಿವೃತ್ತ ಯೋಧರು (ಸಂಗ್ರಹ ಚಿತ್ರ) 
ದೇಶ

ಜೀವಕ್ಕೇನಾದರೂ ಆದರೆ, ಸರ್ಕಾರವೇ ಹೊಣೆ

ಸಮಾನ ಹುದ್ದೆ, ಸಮಾನ ಪಿಂಚಣಿ ಜಾರಿಗಾಗಿ ಹೋರಾಡುತ್ತಿರುವ ನಿವೃತ್ತ ಸೇನಾನಿಗಳು ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ತೀವ್ರ ಒತ್ತಡಕ್ಕೆ ಸಿಲುಕಿದೆ...

ನವದೆಹಲಿ: ಸಮಾನ ಹುದ್ದೆ, ಸಮಾನ ಪಿಂಚಣಿ ಜಾರಿಗಾಗಿ ಹೋರಾಡುತ್ತಿರುವ ನಿವೃತ್ತ ಸೇನಾನಿಗಳು ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ತೀವ್ರ ಒತ್ತಡಕ್ಕೆ ಸಿಲುಕಿದೆ.

14 ದಿನಗಳಿಂದ ಉಪವಾಸ ಕುಳಿತಿರುವ ನಿವೃತ್ತ ಹವಾಲ್ದಾರ್ ಮೇಜರ್ ಸಿಂಗ್ ಅವರ ಆರೋಗ್ಯ ಶನಿವಾರ ಹದಗೆಟ್ಟಿದ್ದು, ಒತ್ತಾಯಪೂರ್ವಕವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ, ನಿರಶನ ನಿರತರ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ಸರ್ಕಾರವೇ ಹೊಣೆ ಎಂದು ನಿವೃತ್ತ ಸೇನಾನಿಗಳು ಎಚ್ಚರಿಸಿದ್ದಾರೆ. ಈ ನಡುವೆ, ಪ್ರತಿಭಟನಾನಿರತರು  ಅಸ್ವಸ್ಥರಾಗುತ್ತಿರುವ ಬಗ್ಗೆ ನಿವೃತ್ತ ಯೋಧರ ಒಕ್ಕೂಟ ಶನಿವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿದೆ.

``ಹವಾಲ್ದಾರ್ ಮೇಜರ್ ಸಿಂಗ್ ಅವರು ಆ.16ರಿಂದಲೇ ಆಮರಣಾಂತ ಉಪವಾಸ ಮಾಡುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಅಪಾಯಕಾರಿ ಮಟ್ಟ ತಲುಪಿದೆ ಎಂದು ವೈದ್ಯರು ಹೇಳಿದ್ದಾರೆ.  ಅವರು ಬದುಕುಳಿಯ ಬೇಕಾದರೆ ಆಸ್ಪತ್ರೆಗೆ ದಾಖಲಿಸಲೇಬೇಕು'' ಎಂದು ಪತ್ರದಲ್ಲಿ ತಿಳಿಸಲಾಗಿದೆ. ಇದೇ ವೇಳೆ, ನಿರಶನನಿರತ ಸೇನಾನಿಗಳು ಜಂತರ್‍ಮಂತರ್ ನಲ್ಲೇ ರಾಖಿಹಬ್ಬ ಆಚರಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT