ಭೂಸ್ವಾಧೀನ ಕಾಯ್ದೆ (ಸಾಂದರ್ಭಿಕ ಚಿತ್ರ) 
ದೇಶ

ಭೂಸ್ವಾಧೀನವಲ್ಲ, ಪೂಲಿಂಗ್!

ಭೂಸ್ವಾಧೀನ ವಿಧೇಯಕ ಅಂಗೀಕಾರಗೊಳ್ಳದೆ ಕಂಗೆಟ್ಟಿರುವ ಕೇಂದ್ರ ಸರ್ಕಾರ ಈಗ ಮೂಲಸೌಕರ್ಯ ಯೋಜನೆಗಳಿಗಿರುವ ಅಡ್ಡಿ ನಿವಾರಣೆಗೆ ಹೊಸ ಪ್ಲ್ಯಾನ್ ಮಾಡಿದೆ...

ನವದೆಹಲಿ: ಭೂಸ್ವಾಧೀನ ವಿಧೇಯಕ ಅಂಗೀಕಾರಗೊಳ್ಳದೆ ಕಂಗೆಟ್ಟಿರುವ ಕೇಂದ್ರ ಸರ್ಕಾರ ಈಗ ಮೂಲಸೌಕರ್ಯ ಯೋಜನೆಗಳಿಗಿರುವ ಅಡ್ಡಿ ನಿವಾರಣೆಗೆ ಹೊಸ ಪ್ಲ್ಯಾನ್ ಮಾಡಿದೆ.

ಅದು, ಲ್ಯಾಂಡ್ ಪೂಲಿಂಗ್. ಅಂದರೆ, ಅಭಿವೃದ್ಧಿಪಡಿಸಿದ ಬಳಿಕ ಭೂಮಿಯನ್ನು ಮೂಲ ಮಾಲೀಕರಿಗೆ ಬಿಟ್ಟುಕೊಡುವುದು. ಆಂಧ್ರವನ್ನು ಮಾದರಿಯಾಗಿಟ್ಟುಕೊಂಡು ಇಂಥ ಯೋಜನೆಗೆ ಕೇಂದ್ರ  ಮುಂದಾಗಿದೆ. ಮೊದಲು ಅಭಿವೃದ್ಧಿ ಯೋಜನೆ ಕೈಗೊಳ್ಳುವುದು. ಬಳಿಕ ಎಕ್ಸ್‍ಪ್ರೆಸ್‍ವೇ, ಸಿಟಿ ಬೈಪಾಸ್ ಯೋಜನೆ ಸೇರಿ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಯ ಬಹುತೇಕ  ಭಾಗವನ್ನು ಮಾಲೀಕರಿಗೆ ವಾಪಸ್ ನೀಡಿ, ವಾಣಿಜ್ಯ ಉದ್ದೇಶಕ್ಕೆ ಬಳಸುವಂತೆ ಸೂಚಿಸಲಾಗುತ್ತದೆ ಎಂದು ಸಚಿವ ಗಡ್ಕರಿ ಹೇಳಿದ್ದಾರೆ ಎಂದು ಖಾಸಗಿ ಪತ್ರಿಕೆ ವರದಿ ಮಾಡಿದೆ.

ಭೂಸುಗ್ರೀವಾಜ್ಞೆ ಇಲ್ಲ
ಕೇಂದ್ರ ಬಿಹಾರ ಚುನಾವಣೆ ಸಮೀಪಿಸುತ್ತಿರುವಂತೆಯೇ ಕೇಂದ್ರ ಸರ್ಕಾರ ಭೂಸ್ವಾಧೀನ ವಿಧೇಯಕದ ವಿಚಾರದಲ್ಲಿಟ್ಟ ಹೆಜ್ಜೆಯನ್ನು ಹಿಂದಿಕ್ಕಿದೆ. ಈ ಬಗ್ಗೆ ಮತ್ತೊಮ್ಮೆ ಸುಗ್ರೀವಾಜ್ಞೆ  ಹೊರಡಿಸುವುದಿಲ್ಲ ಎಂದಿರುವ ಸರ್ಕಾರ, ಯುಪಿಎ ಸರ್ಕಾರ 2013ರಲ್ಲಿ ಅಂಗೀಕರಿಸಿದ್ದ ವಿಧೇಯಕವನ್ನೇ ಮುಂದುವರಿಸಲು ನಿರ್ಧರಿಸಿದೆ. ಅದರಂತೆ, ಸ್ವಾಧೀನ ಪಡಿಸಿಕೊಂಡ ಭೂಮಿಗೆ ಮಾರುಕಟ್ಟೆ ದರದ 4 ಪಟ್ಟು ಹೆಚ್ಚು ಪರಿಹಾರ ಸಿಗಲಿದೆ. ಕೇಂದ್ರ ಸರ್ಕಾರದ ವಿಧೇಯಕವು ಸದ್ಯ ಸಂಸದೀಯ ಸಮಿತಿ ಮುಂದಿದ್ದು, ಅದರ ವರದಿ ಬಂದ ಬಳಿಕ ಮುಂದಿನ ಹೆಜ್ಜೆಯಿಡಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿ ಸುಗ್ರೀವಾಜ್ಞೆ ಲ್ಯಾಪ್ಸ್ ಆಗುವುದು ಬಹುತೇಕ ಖಚಿತ ಎಂದು ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.

ಹೊಸ ಯೋಜನೆ
-ಅಭಿವೃದ್ಧಿ ಬಳಿಕ ಸ್ವಾಧೀನಪಡಿಸಿಕೊಂಡ ಭೂಮಿ ವಾಪಸ್ ನೀಡಲು ಹೆದ್ದಾರಿ ಇಲಾಖೆ ಚಿಂತನೆ
-ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಶೇ.40ರಷ್ಟನ್ನು ಮೂಲ ಮಾಲೀಕನಿಗೆ ವಾಪಸ್ ನೀಡುವ ಯೋಜನೆ
-ಈ ಮಾದರಿಯನ್ನು ಈಗಾಗಲೇ ಆಂಧ್ರಪ್ರದೇಶವು ತನ್ನ ರಾಜಧಾನಿಯ ಅಭಿವೃದ್ಧಿಗೆ ಬಳಸುತ್ತಿದೆ
-ಸ್ವಾಧೀನ ಪ್ರಕ್ರಿಯೆಯ ವೇಗ ಹೆಚ್ಚಿಸಲು ಇದು ಸಹಕಾರಿ ಎನ್ನುವುದು ಸರ್ಕಾರದ ಅಭಿಪ್ರಾಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಂದೆ ಖಾನ್ ಚಂದ್ ನಿಧನ: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್ ಗೆ ಆಘಾತ!

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಕುಣಿಗಲ್ ನಿವಾಸಿಗಳ ದಾರುಣ ಸಾವು

SCROLL FOR NEXT