ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಮತ್ತು ಯುದ್ದದ ಸಂದರ್ಭದ ಚಿತ್ರ 
ದೇಶ

1965ರ ಭಾರತ-ಪಾಕ್ ಯುದ್ಧದಿಂದ ಪಾಕಿಸ್ತಾನಕ್ಕೆ ದುಬಾರಿ ವೆಚ್ಚ: ಹಮೀದ್ ಅನ್ಸಾರಿ

1965ರಲ್ಲಿ ಪಾಕಿಸ್ತಾನದ ಆಕ್ರಮಣವನ್ನು ನಾಶಪಡಿಸುವಲ್ಲಿ ಶ್ರಮಿಸಿದ ಕಾಶ್ಮೀರಿ ಜನರನ್ನು ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ...

ನವದೆಹಲಿ: 1965ರಲ್ಲಿ ಪಾಕಿಸ್ತಾನದ ಆಕ್ರಮಣವನ್ನು ನಾಶಪಡಿಸುವಲ್ಲಿ ಶ್ರಮಿಸಿದ ಕಾಶ್ಮೀರಿ ಜನರನ್ನು ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ನಾಯಕತ್ವವನ್ನು ಶ್ಲಾಘಿಸಿದ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಯುದ್ಧ ಪಾಕಿಸ್ತಾನಕ್ಕೆ ದುಬಾರಿ ಮಿಲಿಟರಿ ವೆಚ್ಚ ಮತ್ತು ರಾಜಕೀಯ ಅಸಂಬದ್ಧತೆಯನ್ನು ಉಂಟುಮಾಡಿತ್ತು ಎಂದು ಹೇಳಿದ್ದಾರೆ.

1965ರ ಭಾರತ-ಪಾಕಿಸ್ತಾನ ಯುದ್ಧದ ಸುವರ್ಣ ವಿಜಯೋತ್ಸವ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಸಂದರ್ಭದಲ್ಲಿ ನಮ್ಮ ದೇಶದ ಸೈನಿಕರ ತ್ಯಾಗ, ಬಲಿದಾನವನ್ನು ನಾವು ಸ್ಮರಿಸಬೇಕು ಎಂದು ಹೇಳಿದರು.

ಪಾಕಿಸ್ತಾನದ "ಮೊಂಡುತನ ಮತ್ತು ತರ್ಕಬದ್ಧವಲ್ಲದ ನಂಬಿಕೆಗಳೇ ಯುದ್ಧಕ್ಕೆ ಕಾರಣವಾಯಿತು. ಭೌಗೋಳಿಕ ಮತ್ತು ಉಪಖಂಡದ ರಾಜಕೀಯ ವಾಸ್ತವಾಂಶಗಳನ್ನು ಬದಲಾಯಿಸಲು ಬಲಪ್ರಯೋಗ ಮಾಡಲಾಯಿತು ಎಂದು ಅವರು ದೇಶದ ಮೂರೂ ಸೇನೆಗಳ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದರು.

1965ರಲ್ಲಿ ಪಾಕಿಸ್ತಾನ ನಮ್ಮ ಸೈನಿಕರ ಮೇಲೆ ಯುದ್ಧ ಮಾಡಲು ಬಂದಾಗ ಆ ಸನ್ನಿವೇಶವನ್ನು ನಿರೀಕ್ಷಿಸಿರಲಿಲ್ಲ. ಆದರೆ ಧೈರ್ಯದಿಂದ ಎದುರಿಸಿದರು. ಅದಕ್ಕೆ ನಮ್ಮ ಸೈನಿಕರು ಮತ್ತು ಲಾಲ್ ಬಹದ್ದೂರು ಶಾಸ್ತ್ರಿಯವರ ಧೈರ್ಯ ಮತ್ತು ದೃಢ ನಿಲುವು ಕಾರಣ ಎಂದರು.

ಭಾರತ ಮತ್ತು ಪಾಕಿಸ್ತಾನ ಮಧ್ಯೆ 1965 ಏಪ್ರಿಲ್ ನಿಂದ ಸೆಪ್ಟೆಂಬರ್ ಮಧ್ಯೆ 17 ದಿನಗಳ ಯುದ್ಧ ನಡೆಯಿತು. ಪಾಕಿಸ್ತಾನ 'ಆಪರೇಷನ್ ಗಿಬ್ರಲ್ತರ್' ಎಂಬ ಹೆಸರಿನಲ್ಲಿ ತನ್ನ ಸೇನಾಪಡೆಯನ್ನು ಜಮ್ಮು-ಕಾಶ್ಮೀರದ ಒಳಗೆ ನುಗ್ಗಿಸಿತು. ಅದಕ್ಕೆ ಪ್ರತಿಯಾಗಿ ಭಾರತ ತನ್ನ ಸೇನೆಯನ್ನು ಯುದ್ಧಕ್ಕೆ ಕಳುಹಿಸಿತು. ಯುದ್ಧದಲ್ಲಿ ಎರಡೂ ಕಡೆಯ ಸಾವಿರಾರು ಸೈನಿಕರು ಸಾವನ್ನಪ್ಪಿದ್ದರು. ನಂತರ ಸೋವಿಯತ್ ಒಕ್ಕೂಟ ಮತ್ತು ಅಮೆರಿಕದ ಮಧ್ಯಸ್ಥಿಕೆಯಿಂದ ಹಾಗೂ ನಂತರ ತಾಷ್ಕೆಂಟ್ ಒಪ್ಪಂದದಿಂಗಾಗಿ ಕದನ ವಿರಾಮ ಘೋಷಿಸಲಾಯಿತು. ಎರಡೂ ಕಡೆಯವರು ತಾವೇ ಗೆದ್ದಿದ್ದು ಎಂದು ಘೋಷಣೆ ಮಾಡಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT