ಅಮಿತ್ ಶಾ 
ದೇಶ

ಬಿಹಾರ ಚುನಾವಣೆ ಮೇಲೆ ಅಮಿತ್ ಶಾ ಕಣ್ಣು

ಮುಂಬರುವ ಬಿಹಾರ ವಿಧಾನ ಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ರಾಷ್ಚ್ರೀಯ ಅಧ್ಯಕ್ಷ ಅಮಿತ್ ಶಾ ಬಿಹಾರ ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ...

ನವದೆಹಲಿ: ಮುಂಬರುವ ಬಿಹಾರ ವಿಧಾನ ಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ರಾಷ್ಚ್ರೀಯ ಅಧ್ಯಕ್ಷ ಅಮಿತ್ ಶಾ ಬಿಹಾರ ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ.

ಕೇಂದ್ರ ಸಚಿವರ ಜೊತೆ ಇಂದು ಸಭೆ ನಡೆಸಿದ ಅಮಿತ್ ಶಾ ಕೇಂದ್ರ ಸರ್ಕಾರ ಅಭಿವೃದ್ಧಿ ಯೋಜನೆಗಳನ್ನು ಜನಪ್ರಿಯಗೊಳಿಸಲು ಹಾಗೂ ಸಾಮಾನ್ಯ ಜನರಿಗೆ ತಲುಪಿಸಲು ಸರ್ಕಾರದ ಜೊತೆ ಸಚಿವರು ಕೈ ಜೋಡಿಸಿ ಸಹಕಾರ ನೀಡಲು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಜನ ಧನ್ ಯೋಜನೆಯ ನಂತರ ಮತ್ತೊಂದು ಪ್ರಮುಖ ಯೋಜನೆಯಾದ ಮುದ್ರಾಮೇಳ ಯೋಜನೆಯನ್ನು ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ನಿಗದಿಗೆ ಮುನ್ನ ಜಾರಿಗೆ ತರಲು ಅಮಿತ್ ಶಾ ನಿರ್ಧರಿಸಿದ್ದಾರೆ. ಕಳೆದ ಏಪ್ರಿಲ್ ನಲ್ಲಿ ಮುದ್ರಾ ಮೇಳ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು.

ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆದಾರರು ಹಾಗೂ ಉದ್ದಿಮೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರ ಸಾಲ ನೀಡಲು ಮುದ್ರಾ ಮೇಳ ಯೋಜನೆಯನ್ನು ಸೆಪ್ಟಂಬರ್ ನಲ್ಲಿ ಆರಂಭಿಸಲು ಚಿಂತನೆ ನಡೆಸಿದ್ದಾರೆ. ಈ ಯೋಜನೆಯಡಿ ಫಲಾನುಭವಿಗಳು 50 ಸಾವಿರದಿಂದ 10 ಲಕ್ಷದವರೆಗೆ ಸಾಲ ಪಡೆಯಬಹುದಾಗಿದೆ.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT