ಅರುಣ್ ಜೈಟ್ಲಿ 
ದೇಶ

ಒಆರ್ ಒಪಿ ವಾರ್ಷಿಕ ಪರಿಷ್ಕರಣೆ ಸಾಧ್ಯವಿಲ್ಲ: ಅರುಣ್ ಜೇಟ್ಲಿ

ಸಮಾನ ಶ್ರೇಣಿ ಸಮಾನ ಪಿಂಚಣಿಗಾಗಿ ಚಳವಳಿ ನಡೆಸುತ್ತಿರುವ ಮಾಜಿ ಸೈನಿಕರ ಬೇಡಿಕೆಯಂತೆ ಪಿಂಚಣಿಯನ್ನು ವಾರ್ಷಿಕವಾಗಿ ಪರಿಷ್ಕರಿಸುವ....

ನವದೆಹಲಿ: ಸಮಾನ ಶ್ರೇಣಿ ಸಮಾನ ಪಿಂಚಣಿಗಾಗಿ ಚಳವಳಿ ನಡೆಸುತ್ತಿರುವ ಮಾಜಿ ಸೈನಿಕರ ಬೇಡಿಕೆಯಂತೆ ಪಿಂಚಣಿಯನ್ನು ವಾರ್ಷಿಕವಾಗಿ ಪರಿಷ್ಕರಿಸುವ ಸಾಧ್ಯತೆಯನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ತಳ್ಳಿಹಾಕಿದ್ದಾರೆ.

ಸಣ್ಣ ವಯಸ್ಸಿನಲ್ಲೇ ನಿವೃತ್ತರಾಗುವ ಯೋಧರ ಹಿತವನ್ನು ಹೆಚ್ಚಿನ ಪಿಂಚಣಿ ನೀಡುವ ಮೂಲಕ ಕಾಯ್ದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ವಾರ್ಷಿಕ ಪಿಂಚಣಿ ಪರಿಷ್ಕರಣೆ ಪ್ರಪಂಚದಲ್ಲಿ ಎಲ್ಲಿಯೂ ನಡೆಯುತ್ತಿಲ್ಲ ಎಂದು ಅವರು ಹೇಳಿದರು.

ಸಮಾನ ಶ್ರೇಣಿಗೆ ಸಮಾನ ಪಿಂಚಣಿ (ಒಆರ್‌ಒಪಿ)ಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ ಅವರು,ಒಂದೇ ಒಂದು ಸಮಸ್ಯೆಯೆಂದರೆ ಅಂಕಗಣಿತದ ಲೆಕ್ಕಾಚಾರ ಎಂದರು. ಸರ್ಕಾರಿ ಉದ್ಯೋಗಿಗಳ 7ನೇ ವೇತನ ಆಯೋಗದ ಶಿಫಾರಸುಗಳು ಶೀಘ್ರದಲ್ಲೇ ಜಾರಿಯಾಗಲಿವೆ ಎಂದು ಅವರು ತಿಳಿಸಿದರು.

ಜಂತರ್ ಮಂಥರ್ ನಲ್ಲಿ ನಿವೃತ್ತ ಸೈನಿಕರು ನಡೆಸುತ್ತಿರುವ ಪ್ರತಿಭಟನೆ ಉಪವಾಸ ಸತ್ಯಾಗ್ರಹ 78ನೇ ದಿನಕ್ಕೆ ತಲುಪಿದೆ. ವರ್ಷಕ್ಕೊಮ್ಮೆ ಅಥವಾ ತಿಂಗಳಿಗೊಮ್ಮೆ ಪಿಂಚಣಿ ಪರಿಷ್ಕರಣೆ  ನಡೆಸಲು ಸಾಧ್ಯವಿಲ್ಲ ಎಂದರು ಅವರು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT