ನರೇಂದ್ರ ಮೋದಿ 
ದೇಶ

ದೇಶದಲ್ಲಿ 'ಓಂ' ಎಂದರೂ ವಿವಾದ ಆಗುತ್ತೆ: ಪ್ರಧಾನಿ ಮೋದಿ

ಓಂ ಎಂದು ಹೇಳಿದರೂ ದೇಶದಲ್ಲಿ ವಿವಾದ ಉಂಟಾಗುತ್ತದೆ. ಏಕೆಂದರೆ ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ತಾತ್ವಿಕ ವಿಚಾರಗಳಲ್ಲಿ...

ನವದೆಹಲಿ: ``ಓಂ ಎಂದು ಹೇಳಿದರೂ ದೇಶದಲ್ಲಿ ವಿವಾದ ಉಂಟಾಗುತ್ತದೆ. ಏಕೆಂದರೆ ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ತಾತ್ವಿಕ ವಿಚಾರಗಳಲ್ಲಿ ಭಿನ್ನಾಭಿಪ್ರಾಯ ವ್ಯಕ್ತವಾಗುತ್ತಿದೆ.

ಹೀಗಾಗಿ, ಈ ಶಬ್ದವನ್ನು ಹೇಗೆ ಹೇಳಬೇಕು ಎಂಬ ಬಗ್ಗೆ ವಾರದ ಕಾಲ ಚರ್ಚೆ ಆರಂಭವಾಗಬಹುದು''  ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯಲ್ಲಿ ತುಳಸೀದಾಸರ ರಾಮಚರಿತ ಮಾನಸದ ಡಿಜಿಟಲ್ ಆವೃತ್ತಿ ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು.

ಆದರೆ ತಮ್ಮ ಹೇಳಿಕೆ ಬಗ್ಗೆ ಹೆಚ್ಚಿನ ವಿವರಣೆ ನೀಡಲಿಲ್ಲ. ಮಾತು ಮುಂದುವರಿಸಿದ ಪ್ರಧಾನಿ ``ಈ ದೇಶದಲ್ಲಿ ರಾಮಚರಿತ ಮಾನಸದ ಬಗ್ಗೆ ಯಾರೂ ಪ್ರಶ್ನೆ ಮಾಡಿಲ್ಲ. ಇದುವರೆಗೆ ವಿವಾದ ಉಂಟಾಗಿಲ್ಲ. ಅದರ ಬಗ್ಗೆ ವಿಶ್ವಾಸ ಇನ್ನೂ ಮುಂದುವರಿದುಕೊಂಡು ಬಂದಿದೆ.

ಇದೀಗ ಡಿಜಿಟಲ್ ಅವತರಣಿಕೆ ಬಿಡುಗಡೆಯಾಗಿದೆ. ಹೀಗಾಗಿ, ಮುಂದೆ ಈ ಬಗ್ಗೆ ವಿವಾದ ಉಂಟಾದರೂ ಅಚ್ಚರಿ ಇಲ್ಲ'' ಎಂದರು ಪ್ರಧಾನಿ. ಜು.21ರಂದು ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ವೇಳೆ ಸೂರ್ಯ ನಮಸ್ಕಾರಕ್ಕೆ ಸಂಬಂಧಿಸಿದಂತೆ ಹಲವು ಮುಸ್ಲಿಂ ಸಂಘಟನೆಗಳು ಆಕ್ಷೇಪ ಎತ್ತಿದ್ದವು. ಈ ಹಿನ್ನೆಲೆಯಲ್ಲಿ ಮೋದಿ ಹೇಳಿಕೆ ಮಹತ್ವದ್ದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT