ಉಪರಾಷ್ಟ್ರಪತಿ ಹಮೀದ್ ಅನ್ಸಾರಿ 
ದೇಶ

ಉಪರಾಷ್ಟ್ರಪತಿ ಅನ್ಸಾರಿ ಹೇಳಿಕೆಗೆ ವಿಹೆಚ್ ಪಿ ವಿರೋಧ, ಕ್ಷಮೆ ಯಾಚನೆಗೆ ಆಗ್ರಹ

ಮುಸಲ್ಮಾನರು ತಾರತಮ್ಯ ಎದುರಿಸುತ್ತಿದ್ದಾರೆಂದು ಹೇಳಿದ್ದ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಹೇಳಿಕೆಗೆ ವಿಶ್ವಹಿಂದೂ ಪರಿಷತ್ ಅಸಮಾಧಾನ ವ್ಯಕ್ತಪಡಿಸಿದೆ.

ನವದೆಹಲಿ: ಮುಸಲ್ಮಾನರು ತಾರತಮ್ಯ ಎದುರಿಸುತ್ತಿದ್ದಾರೆಂದು ಹೇಳಿದ್ದ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಹೇಳಿಕೆಗೆ ವಿಶ್ವಹಿಂದೂ ಪರಿಷತ್ ಅಸಮಾಧಾನ ವ್ಯಕ್ತಪಡಿಸಿದೆ.

ಹಮೀದ್ ಅನ್ಸಾರಿ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಇಲ್ಲವೇ, ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯವನ್ನು ಆಯ್ಕೆ ಮಾಡಿಕೊಳ್ಳಲಿ, ಉಪರಾಷ್ಟ್ರಪತಿಗಳು ನೀಡಿರುವ  ಬೇಜವಾಬ್ದಾರಿಯುತ ಹೇಳಿಕೆಯನ್ನು ವಿಹೆಚ್ ಪಿ ಖಂಡಿಸುತ್ತದೆ ಎಂದು ವಿಶ್ವಹಿಂದೂ ಪರಿಷತ್ ನ ವಕ್ತಾರ ಸುರೇಂದ್ರ ಜೈನ್ ಹೇಳಿದ್ದಾರೆ.

ಮುಸ್ಲಿಮರು ಭಾರತದ ಅತಿದೊಡ್ಡ ಧಾರ್ಮಿಕ ಅಲ್ಪಸಂಖ್ಯಾತರು, ಮುಸ್ಲಿಂ ರಾಷ್ಟ್ರಗಳಲ್ಲಿರುವ ಅಲ್ಪಸಂಖ್ಯಾತರಿಗಿಂತಲೂ ಭಾರತದ ಅಲ್ಪಸಂಖ್ಯಾತರಿಗೆ ಅತಿ ಹೆಚ್ಚು ಸಾಂವಿಧಾನಿಕ ಹಕ್ಕುಗಳನ್ನು ನೀಡಲಾಗಿದೆ. ಮುಸ್ಲಿಮರಿಗಿರುವಷ್ಟು ಹಕ್ಕುಗಳು ಭಾರತದ ಹಿಂದೂಗಳಿಗೂ ಇಲ್ಲ ಎಂದು ಸುರೇಂದ್ರ ಜೈನ್ ಹೇಳಿದ್ದರೆ.

ನಿನ್ನೆ ಅಖಿಲ ಭಾರತ ಮಜ್ ಲೋಯಿಸ್-ಇ-ಮುಶಾವರತ್ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದ ಹಮೀದ್ ಅನ್ಸಾರಿ, ಗುರುತಿಸಿಕೊಳ್ಳುವಿಕೆ, ರಕ್ಷಣೆ, ಶಿಕ್ಷಣ, ಉದ್ಧಾರ ಮತ್ತು ನಿರ್ಧಾರ ತೆಗೆದುಕೊಳ್ಳುವ ವಿಷಯದಲ್ಲಿ ಭಾರತೀಯ ಮುಸಲ್ಮಾನರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳನ್ನು ಸರ್ಕಾರಗಳು ಸರಿಪಡಿಸಬೇಕಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?