ರತನ್ ಟಾಟಾ 
ದೇಶ

ನನ್ನ ಜೀವನ ಬದಲಿಸಿದ್ದು 26/11ರ ಮುಂಬೈ ದಾಳಿ: ರತನ್ ಟಾಟಾ

26/11 ರಂದು ನಡೆಡ ಮುಂಬಯಿ ದಾಳಿ ನನ್ನ ಜೀವನದ ದಿಕ್ಕನ್ನೇ ಬದಲಿಸಿದೆ ಎಂದು ಟಾಟಾ ಟ್ರಸ್ಟ್​ನ ಮುಖ್ಯಸ್ಥ ರತನ್ ಟಾಟಾ ಹೇಳಿದ್ದಾರೆ

ವಡೋದರಾ: 26/11 ರಂದು ನಡೆಡ ಮುಂಬಯಿ ದಾಳಿ ನನ್ನ ಜೀವನದ ದಿಕ್ಕನ್ನೇ ಬದಲಿಸಿದೆ ಎಂದು ಟಾಟಾ ಟ್ರಸ್ಟ್​ನ ಮುಖ್ಯಸ್ಥ ರತನ್ ಟಾಟಾ ಹೇಳಿದ್ದಾರೆ.

ಖಾಸಗಿ ಸಂಸ್ಥೆಯೊಂದರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ನನ್ನ ಬದುಕಿನಲ್ಲಿ ಕಳೆದ ದಿನಗಳನ್ನು ಮೆಲುಕು ಹಾಕಿದರೆ ಮೊದಲು ನೆನಪಿಗೆ ಬರುವುದೇ ಮುಂಬೈ ದಾಳಿ. ಇದು ನನ್ನ ಜೀವನದಲ್ಲಿ ಬದಲಾವಣೆಯ ಬೀರುಗಾಳಿ ಬೀಸಿದೆ ಎಂದು ಟಾಟಾ ಟ್ರಸ್ಟ್​ನ ಮುಖ್ಯಸ್ಥ ರತನ್ ಟಾಟಾ ಹೇಳಿದ್ದಾರೆ.

ಉಗ್ರರ ಅಟ್ಟಹಾಸ ನನ್ನ ಧ್ವನಿಯನ್ನೆ ಅಡಗಿಸಿತ್ತು. ದಾಳಿಯಲ್ಲಿ ಸಂಭವಿಸಿದ ಸಾವು ನೋವಿನ ಹೃದಯ ವಿದ್ರಾವಕ ಘಟನೆಯಿಂದ ಇಂದಿಗೂ ಹೊರ ಬರಲು ಸಾಧ್ಯವಾಗುತ್ತಿಲ್ಲ. ಆ ಸಂದರ್ಭದಲ್ಲಿ ಪ್ರತಿ ಸಂಜೆ ಆಸ್ಪತ್ರೆಗೆ ಭೇಟಿ ನೀಡಿದಾಗ ಮನ ಕರಗುತ್ತಿತ್ತು ಎಂದು ನೊಂದು ಹೇಳಿದ್ದಾರೆಯ

ಗಾಯಾಳುಗಳು ಹಾಗೂ ರೋಗಿಗಳ ಹಣ ಕಟ್ಟಲು ಅಂದು ಯಾರೂ ಮುಂದೆ ಬರುತ್ತಿರಲ್ಲಿಲ್ಲ. ಇದರಿಂದಾಗಿ ಇಂಥವರಿಗಾಗಿಯೇ ಒಂದು ಟ್ರಸ್ಟ್ ಹುಟ್ಟುಹಾಕುವ ಆಲೋಚನೆ ಬಂದಿತು ಎಂದು ತಿಳಿಸಿದರು. ಈ ದೇಶದ ಕಾನೂನಿನಲ್ಲಿ ಎಲ್ಲರಿಗೂ ಸಮಾನ ಅವಕಾಶವಿದ್ದು, ದೇಶದ ಸರ್ವಾಂಗೀಣ ಪ್ರಗತಿಗೆ ಎಲ್ಲರೂ ಶ್ರಮಿಸಬೇಕೆಂದು ಸಲಹೆ ನೀಡಿದರು .

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT