ಪ್ರಧಾನಿ ನರೇಂದ್ರ ಮೋದಿ 
ದೇಶ

ವಿಪಕ್ಷಗಳ ಗದ್ದಲ: ಅಸಮಾಧಾನಗೊಂಡು ಸದನದಿಂದ ಹೊರ ನಡೆದ ಮೋದಿ

ವಿ.ಕೆ.ಸಿಂಗ್ ರಾಜೀನಾಮೆ ಒತ್ತಾಯಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದೂ, ಸ್ಪೀಕರ್ ಮಾತನ್ನೂ ಕೇಳದ ಹಂತ ತಲುಪಿದಾಗ ಮನನೊಂದ ಪ್ರಧಾನಿ ಮೋದಿ ಸದನದಿಂದ ...

ನವದೆಹಲಿ: ಕೇಂದ್ರ ಸಚಿವ ವಿ.ಕೆ.ಸಿಂಗ್ ರಾಜೀನಾಮೆ ಒತ್ತಾಯಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದೂ, ಸ್ಪೀಕರ್ ಮಾತನ್ನೂ ಕೇಳದ ಹಂತ ತಲುಪಿದಾಗ ಮನನೊಂದ ಪ್ರಧಾನಿ ಮೋದಿ ಸದನದಿಂದ ಹೊರ ನಡೆದರು.

ಸುಮಾರು 40 ನಿಮಿಷಗಳ ಗಲಾಟೆ ನಡೆದಿದ್ದು, ಸ್ಪೀಕರ್ ಸುಮಿತ್ರಾ ಮಹಾಜನ್ ಪ್ರತಿಭಟನೆ ನಡೆಸುತ್ತಿದ್ದ ಸಂಸದರಿಗೆ ಸುಮ್ಮನಾಗುವಂತೆ ಮನವಿ ಮಾಡಿಕೊಂಡರು ಪ್ರಯೋಜನವಾಗಲಿಲ್ಲ.

ದಲಿತರ ವಿರುದ್ಧ 'ಅವಹೇಳನಕಾರಿ ಹೇಳಿಕೆ' ನೀಡಿರುವ ಸಚಿವ .ವಿ.ಕೆ. ಸಿಂಗ್ ರಾಜೀನಾಮೆ ನೀಡಬೇಕೆಂದು ಒಂದೇ ಸಮನೆ ಒತ್ತಾಯಿಸಿದರು 'ಸಿಂಗ್ ರಾಜೀನಾಮೆ ನೀಡಲಿ' ಎಂದು ಕೂಗುತ್ತಿದ್ದ ಪ್ರತಿಭಟನಾಕಾರರಿಗೆ ಸುಮ್ಮನಿರುವಂತೆ ಸ್ಪೀಕರ್ ಒಂದು ಕೈಯಿಂದ ಆಗ್ರಹಿಸುತ್ತಿದ್ದರೆ, ಮತ್ತೊಂದು ಕೈಯಲ್ಲಿ ಕಲಾಪ ಮುಂದುವರಿಸುವಂತೆ ಸೂಚಿಸುತ್ತಿದ್ದರು.

ಪ್ರಶ್ನೆ ವೇಳೆ ಮುಗಿದಾಗ, ಸ್ಪೀಕರ್ ಪ್ರತಿಪಕ್ಷಗಳಿಗೆ ಸದನ ಸುಗಮವಾಗಿ ನಡೆಯಲು ಅನುವು ಮಾಡಿಕೊಡುವಂತೆ ಆಗ್ರಹಿಸಿದರೂ, ಪ್ರತಿಭಟನಾನಿರತ ಸಂಸದರು ಸದನದಿಂದ ಹೊರ ನಡೆದರು. ಈ ಹಿನ್ನೆಲೆಯಲ್ಲಿ ಬೇಸತ್ತ ಪ್ರಧಾನಿ ಮೋದಿ ಲೋಕಸಭೆ ಕಲಾಪದಿಂದ ಎದ್ದು ಹೊರನಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT