ದಿಗ್ವಿಜಯ್ ಸಿಂಗ್ 
ದೇಶ

ಎಐಸಿಸಿ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ವಿರುದ್ಧ ವಂಚನೆ ಪ್ರಕರಣ ದಾಖಲು

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ವಂಚನೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೆರವು ನೀಡಿದ ಆರೋಪದ ಮೇಲೆ ರಾಜ್ಯ ಆರ್ಥಿಕ ...

ಭೂಪಾಲ್: ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ವಂಚನೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೆರವು ನೀಡಿದ ಆರೋಪದ ಮೇಲೆ ರಾಜ್ಯ ಆರ್ಥಿಕ ಅಪರಾಧಗಳ ಘಟಕ ಪ್ರಕರಣ ದಾಖಲಿಸಿದೆ.

1993ರಿಂದ 2003ರವರೆಗೆ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿದ್ದ ದಿಗ್ವಿಜಯ್ ಸಿಂಗ್, ಹಾಗೂ ಅವರ ಸಂಪುಟ ಸಹೋದ್ಯೋಗಿ ಸೇರಿ ಮೂವರು, ತಾಂತ್ರಿಕ ಶಿಕ್ಷಣ ಸಚಿವ ರಾಜಾ ಪಟೇರಿಯಾ ಜತೆಗೂಡಿ ಆರ್‌ಕೆಡಿಎಫ್ ಕಾಲೇಜಿಗೆ ವಿಧಿಸಿದ್ದ 24 ಲಕ್ಷ ರೂ.ದಂಡವನ್ನು 2.5 ಲಕ್ಷ ರೂಗೆ ಇಳಿಸಿದ್ದರು ಎಂದು ಆರೋಪಿಸಲಾಗಿದೆ,

ಇವರ ಜೊತೆಗೆ ಕಾಲೇಜಿನ ಮುಖ್ಯಸ್ಥ ಸುನೀಲ್ ಕಪೂರ್ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಮೂವರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಂಚನೆ (ಸೆ.420), ನಕಲಿ ದಾಖಲೆ ಬಳಕೆ (ಸೆ.467), ಪಿತೂರಿ (ಸೆ.120 ಬಿ) ಹಾಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT