ದಿಗ್ವಿಜಯ್ ಸಿಂಗ್ 
ದೇಶ

ಎಐಸಿಸಿ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ವಿರುದ್ಧ ವಂಚನೆ ಪ್ರಕರಣ ದಾಖಲು

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ವಂಚನೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೆರವು ನೀಡಿದ ಆರೋಪದ ಮೇಲೆ ರಾಜ್ಯ ಆರ್ಥಿಕ ...

ಭೂಪಾಲ್: ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ವಂಚನೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೆರವು ನೀಡಿದ ಆರೋಪದ ಮೇಲೆ ರಾಜ್ಯ ಆರ್ಥಿಕ ಅಪರಾಧಗಳ ಘಟಕ ಪ್ರಕರಣ ದಾಖಲಿಸಿದೆ.

1993ರಿಂದ 2003ರವರೆಗೆ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿದ್ದ ದಿಗ್ವಿಜಯ್ ಸಿಂಗ್, ಹಾಗೂ ಅವರ ಸಂಪುಟ ಸಹೋದ್ಯೋಗಿ ಸೇರಿ ಮೂವರು, ತಾಂತ್ರಿಕ ಶಿಕ್ಷಣ ಸಚಿವ ರಾಜಾ ಪಟೇರಿಯಾ ಜತೆಗೂಡಿ ಆರ್‌ಕೆಡಿಎಫ್ ಕಾಲೇಜಿಗೆ ವಿಧಿಸಿದ್ದ 24 ಲಕ್ಷ ರೂ.ದಂಡವನ್ನು 2.5 ಲಕ್ಷ ರೂಗೆ ಇಳಿಸಿದ್ದರು ಎಂದು ಆರೋಪಿಸಲಾಗಿದೆ,

ಇವರ ಜೊತೆಗೆ ಕಾಲೇಜಿನ ಮುಖ್ಯಸ್ಥ ಸುನೀಲ್ ಕಪೂರ್ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಮೂವರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಂಚನೆ (ಸೆ.420), ನಕಲಿ ದಾಖಲೆ ಬಳಕೆ (ಸೆ.467), ಪಿತೂರಿ (ಸೆ.120 ಬಿ) ಹಾಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: ಭಾರತಕ್ಕೆ ಬರದಿದ್ದರೇ ಟೂರ್ನಿಯಿಂದ ಹೊರಕ್ಕೆ; ಬಾಂಗ್ಲಾಗೆ ಐಸಿಸಿ 24 ಗಂಟೆ ಅಂತಿಮ ಗಡುವು!

35 ಎಸೆತಗಳಲ್ಲಿ 84 ರನ್: 5000 ರನ್ ಸೇರಿದಂತೆ ಒಂದೇ ಪಂದ್ಯದಲ್ಲಿ 5 ದಾಖಲೆ ಮುರಿದ ಅಭಿಷೇಕ್ ಶರ್ಮಾ

ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

SCROLL FOR NEXT