ದೆಹಲಿ ವಿಧಾನಸಭೆ 
ದೇಶ

ದೆಹಲಿ ವಿಧಾನಸಭೆಯಲ್ಲಿ ಜನಲೋಕಪಾಲ್ ವಿಧೇಯಕ ಅಂಗೀಕಾರ

ಪ್ರಮುಖ ಜನಲೋಕಪಾಲ್ ವಿಧೇಯಕಕ್ಕೆ ದೆಹಲಿ ವಿಧಾನಸಭೆಯಲ್ಲಿ ಅಂಗೀಕರ ಸಿಕ್ಕಿದೆ...

ನವದೆಹಲಿ: ಪ್ರಮುಖ ಜನಲೋಕಪಾಲ್ ವಿಧೇಯಕಕ್ಕೆ ದೆಹಲಿ ವಿಧಾನಸಭೆಯಲ್ಲಿ  ಅಂಗೀಕರ ಸಿಕ್ಕಿದೆ. 
ದೆಹಲಿ ವಿಧಾನಸಭೆಯಲ್ಲಿ ಜನಲೋಕಪಾಲ ಬಿಲ್ ಬಗ್ಗೆ ನಡೆದ ಚರ್ಚೆ ಬಳಿಕ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿದೆ. 
ವಿಧಾನಸಭೆಯಲ್ಲಿ ಜನಲೋಕಪಾಲ್ ಬಿಲ್ ಕುರಿತು ಮಾತನಾಡಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆಮ್ ಆದ್ಮಿ ಪಕ್ಷ ಸ್ಥಾಪಿಸಿದಾಗ ಪ್ರಮುಖ ರಾಜಕೀಯ ಪಕ್ಷಗಳು ಅಪಹಾಸ್ಯ ಮಾಡಿದ್ದವು. ಅಲ್ಲದೆ ಚುನಾವಣೆ ಎದುರಿಸುವಂತೆ ಸವಾಲು ಹಾಕಿದ್ದರು. ಜನರ ಆಶೀರ್ವಾದದಿಂದಾಗಿ ನಾವು ವಿಧಾನಸಭೆಯಲ್ಲಿ ಸುಮಾರು 67 ಕ್ಷೇತ್ರಗಳಲ್ಲಿ ಭರ್ಜರಿಯಾಗಿ ಗೆಲವು ಸಾಧಿಸಿ, ಇಂದು ಜನಲೋಕಪಾಲ್ ಬಿಲ್ ರೂಪಿಸಿದ್ದೇವೆ ಎಂದರು. 
ಜನ ಸಾಮಾನ್ಯನಲ್ಲಿ ಅತ್ಯಂತ ಹೆಚ್ಚು ಶಕ್ತಿ ಇದೆ. ಆತ ಮನಸ್ಸು ಮಾಡಿದರೆ ಎನು ಬೇಕಾದರೂ ಮಾಡಬಹುದು. ಲೋಕಪಾಲ್ ಕಾನೂನು ದೇಶದ ಜನತೆಯ ಕಾನೂನು ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 
ಕಳೆದ 2014ರ ಫೆಬ್ರವರಿಯಲ್ಲಿ ದೆಹಲಿ ಸಚಿವ ಸಂಪುಟ ಸಭೆಯಲ್ಲಿ ಜನಲೋಕಪಾಲ್ ವಿಧೇಯಕ ಅಂಗೀಕಾರವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT