ಸಾಂದರ್ಭಿಕ ಚಿತ್ರ 
ದೇಶ

ನಿರ್ಭಯಾ ಬಾಲಾಪರಾಧಿ ಮೇಲೆ ಎನ್‍ಜಿಒ ನಿಗಾ?

ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದ ಬಾಲಾಪರಾಧಿ ತನ್ನ ಶಿಕ್ಷೆ ಪೂರೈಸಿ ಶೀಘ್ರದಲ್ಲೇ...

ನವದೆಹಲಿ: ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದ ಬಾಲಾಪರಾಧಿ ತನ್ನ ಶಿಕ್ಷೆ ಪೂರೈಸಿ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾನೆ. 
ಆದರೆ ಆತನನ್ನು ಕಣ್ಗಾವಲಿಗೆ ಒಳಪಡಿಸಲಾಗುತ್ತದೆ. 21 ವರ್ಷದ ಈ ಯುವಕನ ಮೇಲೆ ಎನ್‍ಜಿಒ ಒಂದು ನಿಗಾ ಇಡಲಿದೆ ಎಂದು ಹೇಳಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ ಒಟ್ಟು 6 ಜನರ ಪೈಕಿ ಈತನೇ ಕಿರಿಯನಾಗಿದ್ದ. 
23 ವರ್ಷದ ಪ್ಯಾರಾಮೆಡಿಕಲ್  ವಿದ್ಯಾರ್ಥಿನಿ ಮೇಲೆ ಈ ತಂಡ ದೆಹಲಿಯ ಬಸ್ಸೊಂದರಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿ, ಭೀಕರವಾಗಿ ಹಿಂಸಿಸಿತ್ತು. ಯುವಕನ ಬಿಡುಗಡೆ ಬಗ್ಗೆ `ಟೈಮ್ಸ್ ನೌ' ಸುದ್ದಿವಾಹಿನಿ ವರದಿ ಮಾಡಿದೆ. ಹಿಂದೆ ಕೇಂದ್ರ ಸಚಿವೆ ಮನೇಕಾ ಗಾಂಧಿ ಅವರು ಅಪರಾಧಿಯ ಬಿಡುಗಡೆ ಕುರಿತು ಆತಂಕ ವ್ಯಕ್ತಪಡಿಸಿದ್ದರು. 
ಆತ ಹೊರಬಂದ ಮೇಲೂ ಆತನ ಮೇಲೊಂದು ಕಣ್ಣಿಡಬೇಕು ಎಂದು ಅಬಿsಪ್ರಾಯಪಟ್ಟಿದ್ದರು. ಇದೇ ವೇಳೆ ಅತ್ಯಾಚಾರ ದುರ್ದೈವಿಯ ಪೋಷಕರೂ ಕಾನೂನು ವ್ಯವಸ್ಥೆಯ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿ, ಅಪರಾಧಿ ಸುಧಾರಣೆ ಗೊಂಡಿದ್ದಾನೋ ಇಲ್ಲವೋ ತಿಳಿಯದೇ ಬಾಲಾಪರಾಧಿ ಎಂಬ ಕಾರಣದಿಂದ ಮೂರೇ ವರ್ಷದಲ್ಲಿ ಹೊರಬಿಡುವ ಬಗ್ಗೆ ಅಚ್ಚರಿ ತೋರಿದ್ದರು. 
ಮಿಕ್ಕ 5 ಮಂದಿಯಲ್ಲಿ ಒಬ್ಬ ಜೈಲಿನಲ್ಲೇ ಮೃತಪಟ್ಟಿದ್ದಾನೆ. ನಾಲ್ವರು ಮರಣದಂಡನೆಯ ಭೀತಿಯಲ್ಲಿದ್ದಾರೆ. ಅತ್ಯಾಚಾರಕ್ಕೊಳಗಾದ ನಿರ್ಭಯಾ 13 ದಿನ ಕಾಲ ಸಿಂಗಾಪುರ್‍ನ ಆಸ್ಪತ್ರೆಯೊಂದರಲ್ಲಿ ಸಾವು ಬದುಕಿನ ನಡುವೆ ಹೋರಾಡಿ, ಮರಣಹೊಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT