ಸಾಂದರ್ಭಿಕ ಚಿತ್ರ 
ದೇಶ

ನಿರ್ಭಯಾ ಬಾಲಾಪರಾಧಿ ಮೇಲೆ ಎನ್‍ಜಿಒ ನಿಗಾ?

ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದ ಬಾಲಾಪರಾಧಿ ತನ್ನ ಶಿಕ್ಷೆ ಪೂರೈಸಿ ಶೀಘ್ರದಲ್ಲೇ...

ನವದೆಹಲಿ: ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದ ಬಾಲಾಪರಾಧಿ ತನ್ನ ಶಿಕ್ಷೆ ಪೂರೈಸಿ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾನೆ. 
ಆದರೆ ಆತನನ್ನು ಕಣ್ಗಾವಲಿಗೆ ಒಳಪಡಿಸಲಾಗುತ್ತದೆ. 21 ವರ್ಷದ ಈ ಯುವಕನ ಮೇಲೆ ಎನ್‍ಜಿಒ ಒಂದು ನಿಗಾ ಇಡಲಿದೆ ಎಂದು ಹೇಳಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ ಒಟ್ಟು 6 ಜನರ ಪೈಕಿ ಈತನೇ ಕಿರಿಯನಾಗಿದ್ದ. 
23 ವರ್ಷದ ಪ್ಯಾರಾಮೆಡಿಕಲ್  ವಿದ್ಯಾರ್ಥಿನಿ ಮೇಲೆ ಈ ತಂಡ ದೆಹಲಿಯ ಬಸ್ಸೊಂದರಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿ, ಭೀಕರವಾಗಿ ಹಿಂಸಿಸಿತ್ತು. ಯುವಕನ ಬಿಡುಗಡೆ ಬಗ್ಗೆ `ಟೈಮ್ಸ್ ನೌ' ಸುದ್ದಿವಾಹಿನಿ ವರದಿ ಮಾಡಿದೆ. ಹಿಂದೆ ಕೇಂದ್ರ ಸಚಿವೆ ಮನೇಕಾ ಗಾಂಧಿ ಅವರು ಅಪರಾಧಿಯ ಬಿಡುಗಡೆ ಕುರಿತು ಆತಂಕ ವ್ಯಕ್ತಪಡಿಸಿದ್ದರು. 
ಆತ ಹೊರಬಂದ ಮೇಲೂ ಆತನ ಮೇಲೊಂದು ಕಣ್ಣಿಡಬೇಕು ಎಂದು ಅಬಿsಪ್ರಾಯಪಟ್ಟಿದ್ದರು. ಇದೇ ವೇಳೆ ಅತ್ಯಾಚಾರ ದುರ್ದೈವಿಯ ಪೋಷಕರೂ ಕಾನೂನು ವ್ಯವಸ್ಥೆಯ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿ, ಅಪರಾಧಿ ಸುಧಾರಣೆ ಗೊಂಡಿದ್ದಾನೋ ಇಲ್ಲವೋ ತಿಳಿಯದೇ ಬಾಲಾಪರಾಧಿ ಎಂಬ ಕಾರಣದಿಂದ ಮೂರೇ ವರ್ಷದಲ್ಲಿ ಹೊರಬಿಡುವ ಬಗ್ಗೆ ಅಚ್ಚರಿ ತೋರಿದ್ದರು. 
ಮಿಕ್ಕ 5 ಮಂದಿಯಲ್ಲಿ ಒಬ್ಬ ಜೈಲಿನಲ್ಲೇ ಮೃತಪಟ್ಟಿದ್ದಾನೆ. ನಾಲ್ವರು ಮರಣದಂಡನೆಯ ಭೀತಿಯಲ್ಲಿದ್ದಾರೆ. ಅತ್ಯಾಚಾರಕ್ಕೊಳಗಾದ ನಿರ್ಭಯಾ 13 ದಿನ ಕಾಲ ಸಿಂಗಾಪುರ್‍ನ ಆಸ್ಪತ್ರೆಯೊಂದರಲ್ಲಿ ಸಾವು ಬದುಕಿನ ನಡುವೆ ಹೋರಾಡಿ, ಮರಣಹೊಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT