ಪಿಐಬಿ ಎಡಿಟ್ ಮಾಡಿರುವ ಚಿತ್ರ(ಬಲಭಾಗ) 
ದೇಶ

ಮೋದಿ ವೈಮಾನಿಕ ಸಮೀಕ್ಷೆ ಚಿತ್ರ ಎಡಿಟ್: ಪಿಐಬಿ ಎಡವಟ್ಟು

ಜಲಪ್ರವಾಹ ಉಂತಾಗಿರುವ ತಮಿಳುನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿದ್ದ ವೈಮಾನಿಕ ಸಮೀಕ್ಷೆಯ ಫೊಟೋ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನವದೆಹಲಿ: ಜಲಪ್ರವಾಹ ಉಂತಾಗಿರುವ ತಮಿಳುನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿದ್ದ ವೈಮಾನಿಕ ಸಮೀಕ್ಷೆಯ ಫೊಟೋ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪ್ರೆಸ್ ಇನ್- ಫಾರ್ಮೇಶನ್ ಬ್ಯುರೋ (ಪಿಐಬಿ) ಬಿಡುಗಡೆ ಮಾಡಿರುವ ಮೋದಿ ವೈಮಾನಿಕ ಸಮೀಕ್ಷೆ ನಡೆಸುತ್ತಿರುವ ಫೋಟೊ ಟೀಕೆಗೆ ಗುರಿಯಾಗಿದ್ದು, ಫೋಟೊ ಶಾಪ್ ನಲ್ಲಿ ಎಡಿಟ್ ಮಾಡಿ ಬಿಡುಗಡೆಗೊಳಿಸಿದೆ.
ಜಲಾವೃತಗೊಂಡಿರುವ ಪ್ರದೇಶಗಳನ್ನು ಪ್ರಧಾನಿ ವಿಮಾನದ ಕಿಟಕಿ ಮೂಲಕ ವೀಕ್ಷಿಸುತ್ತಿರುವ ಚಿತ್ರ ಇದಾಗಿದ್ದು, ಮೂಲ ಫೋಟೋದಲ್ಲಿ ಕಿಟಕಿ ಮಸುಕಾಗಿ ಕಾಣುತ್ತಿದೆ. ಬಳಿಕ ಇದನ್ನು ಫೋಟೋಶಾಪ್‌ನಲ್ಲಿ ತಿದ್ದಿ ಹೊರಗಿನ ದೃಶ್ಯ ಕಾಣುವಂತೆ ಮಾಡಲಾಗಿದೆ. ಇದರಿಂದ ನೈಜತೆಗೆ ಧಕ್ಕೆ ಯಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ನಂತರ ಫೋಟೊವನ್ನು ತೆಗೆದುಹಾಕಿರುವ ಪಿಐಬಿ ತಪ್ಪನ್ನು ಸರಿಪಡಿಸಿಕೊಂಡಿದೆ. ಪಿಐಬಿಯ ಈ ಎಡವಟ್ಟು ಟ್ವಿಟರ್ ನಲ್ಲಿ ಕೆಲ ಕಾಲ ಟ್ರೆಂಡಿಂಗ್ ನಲ್ಲಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT