ದಂಡುಪಾಳ್ಯ ತಂಡ 
ದೇಶ

ಕುಖ್ಯಾತ ದಂಡುಪಾಳ್ಯ ಹಂತಕರಿಗೆ 'ಸುಪ್ರೀಂ' ರಿಲೀಫ್

ವಿಕೃತವಾಗಿ ಕೊಲೆ ಮಾಡುವ ಮೂಲಕ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕುಖ್ಯಾತ ದಂಡುಪಾಳ್ಯದ ಹಂತಕರಿಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ...

ನವದೆಹಲಿ: ವಿಕೃತವಾಗಿ ಕೊಲೆ ಮಾಡುವ ಮೂಲಕ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕುಖ್ಯಾತ ದಂಡುಪಾಳ್ಯದ ಹಂತಕರಿಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. 
2014ರಲ್ಲಿ ಹೈಕೋರ್ಟ್ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ದಂಡುಪಾಳ್ಯದ ಹಂತರ ವಿರುದ್ಧದ ಪ್ರಕರಣವನ್ನು ಖುಲಾಸೆ ಮಾಡಿತ್ತು. ಈ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ಸುಪ್ರೀಂಕೋರ್ಟ್ ಮತ್ತೆ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಅರ್ಜಿ ವಜಾ ಮಾಡಿ ದಂಡುಪಾಳ್ಯ ತಂಡದ 6 ಆರೋಪಿಗಳಿಗೆ ರಿಲೀಫ್​ ನೀಡಿದೆ.
ತುಮಕೂರು ಮತ್ತು ಹಾಸನ ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ವಿವಿಧ ಹತ್ಯಾ ಪ್ರಕರಣಗಳ ಕುಖ್ಯಾತ ದಂಡು ಪಾಳ್ಯ ಗ್ಯಾಂಗ್ ಗೆ 2010ರಲ್ಲಿ ಸೆಷನ್ಸ್​ ಕೋರ್ಟ್​ ಗಲ್ಲುಶಿಕ್ಷೆ ವಿಧಿಸಿತ್ತು. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ 2014ರಲ್ಲಿ ಹೈಕೋರ್ಟ್ ದಂಡುಪಾಳ್ಯದ ಹಂತರ ವಿರುದ್ಧದ ಪ್ರಕರಣವನ್ನು ಖುಲಾಸೆ ಮಾಡಿತ್ತು.
ಆರೋಪಿಗಳಾದ ದಂಡುಪಾಳ್ಯದ ವೆಂಕಟರಾಮ, ದೊಡ್ಡಹನುಮ, ಹೊಟ್ಟೆ ಕೃಷ್ಣ,  ಚಿಕ್ಕ ಮುನಿಯಪ್ಪ, ಕೃಷ್ಣ, ತಿಮ್ಮ ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT