ಜ್ಯೋತಿರಾದಿತ್ಯ ಸಿಂಧ್ಯಾ 
ದೇಶ

ತುರ್ತು, ಸಿಖ್ ಹತ್ಯಾಕಾಂಡ ತಪ್ಪು: ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ

ತುರ್ತುಪರಿಸ್ಥಿತಿ ಒಂದು ಪ್ರಮಾದ. 1984ರ ಸಿಖ್ ವಿರೋಧಿ ದಂಗೆ ತಪ್ಪು ಎಂದು ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ...

ನವದೆಹಲಿ: ತುರ್ತುಪರಿಸ್ಥಿತಿ ಒಂದು ಪ್ರಮಾದ. 1984ರ ಸಿಖ್ ವಿರೋಧಿ ದಂಗೆ ತಪ್ಪು ಎಂದು ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಹೇಳಿದ್ದಾರೆ. ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. 
ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಆದದ್ದು ತಪ್ಪೆಂಬುದನ್ನು ನಾವು ಜೊತೆಯಾಗಿ ಯಾಕೆ ಹೇಳಬಾರದು ಎಂದು ಪ್ರಶ್ನಿಸಿರುವ ಸಿಂಧ್ಯಾ, ಸಿಖ್ ದಂಗೆಗಳಲ್ಲಿ ಸಂಭವಿಸಿದ್ದು ಕೂಡ ತಪ್ಪೇ. ನಮ್ಮ ನಡುವೆ ಸಾಕಷ್ಟು ದೋಷಾರೋಪಣೆ ನಡೆದಿದೆ. 
ಆಡಳಿತದಲ್ಲಿದ್ದ ಸರ್ಕಾರ ಯಾವುದೆಂದು ನೋಡಿ ದೂರುವ ಬದಲಿಗೆ ಸರಿಯನ್ನು ಸರಿಯೆಂದು, ತಪ್ಪನ್ನು ತಪ್ಪೆಂದೇ ನಾವು ಹೇಳಬೇಕು. ಜಗತ್ತಿನಲ್ಲೇ ದೊಡ್ಡದಾದ ಪ್ರಜಾಪ್ರಭುತ್ವ ದೇಶವಾದ ನಮ್ಮಲ್ಲಿ ಪ್ರಜಾತಾಂತ್ರಿಕ ಮೌಲ್ಯಗಳನ್ನು ನಾವು ಎತ್ತಿ ಹಿಡಿಯಬೇಕು ಎಂದು ಸಿಂಧ್ಯಾ ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಮಾಜಿ ಸಚಿವ ಚಿದಂಬರಂ ಲೇಖಕ ಸಲ್ಮಾನ್ ರಶ್ದಿ ಅವರ ವಿವಾದಾತ್ಮಕ ಕೃತಿಯನ್ನು ನಿಷೇಧಿಸಿದ್ದ ಕ್ರಮ ಸರಿಯಲ್ಲ ಎಂದು ಹೇಳಿಕೆ ನೀಡಿ ಸುದ್ದಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT