ಸಾಂದರ್ಭಿಕ ಚಿತ್ರ 
ದೇಶ

ಪಾಕಿಸ್ತಾನ ಬೇಹುಗಾರಿಕೆ ತನಿಖೆ; ದೆಹಲಿ ಪೋಲಿಸರಿಂದ ಮತ್ತೊಬ್ಬನ ಬಂಧನ

ಪಾಕಿಸ್ತಾನಿ ಮೂಲದ ಐ ಎಸ್ ಐ ನಡೆಸುತ್ತಿರುವ ಬೇಹುಗಾರಿಕೆಯ ಸಂಬಂಧ ನಡೆಯುತ್ತಿರುವ ತನಿಖೆಯ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದು

ನವದೆಹಲಿ: ಪಾಕಿಸ್ತಾನಿ ಮೂಲದ ಐ ಎಸ್ ಐ ನಡೆಸುತ್ತಿರುವ ಬೇಹುಗಾರಿಕೆಯ ಸಂಬಂಧ ನಡೆಯುತ್ತಿರುವ ತನಿಖೆಯ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದು ಈಗ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.

ಬಂಧಿತನಾದವನನ್ನು ಸಬರ್ ಎಂದು ಗುರುತಿಸಲಾಗಿದ್ದು, ಜಮ್ಮು ಕಾಶ್ಮೀರದ ಸರ್ಕಾರಿ ಶಾಲೆಯಲ್ಲಿ ಅಧ್ಯಾಪಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇದಕ್ಕೂ ಮುಂಚೆ ದೆಹಲಿ ಪೊಲೀಸರು ಗಡಿ ಭದ್ರತಾ ಪಡೆಯ (ಬಿ ಎಸ್ ಎಫ್) ಮುಖ್ಯ ಕಾಂಸ್ಟೆಬರ್ ಅಬ್ದುಲ್ ರಶೀದ್, ೪೪ ವರ್ಷದ ಗ್ರಂಥಾಲಯ ಸಹಾಯಕ ಕಫಿತುಲ್ಲಾ ಖಾನ್ ಅಲಿಯಾಸ್ ಮಾಸ್ಟರ್ ರಾಜ ಇವರುಗಳನ್ನು ಭಾರತದ ಭದ್ರತೆಗೆ ಸಂಬಧಿಸಿದಂತೆ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐ ಎಸ್ ಐ ಗೆ ಒದಗಿಸಿದ ಆರೋಪದಲ್ಲಿ ಜಮ್ಮು ಕಾಶ್ಮೀರದಿಂದಲೇ ಬಂಧಿಸಿದ್ದರು.

ಅಲ್ಲದೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಿಂದ ಭಾರತೀಯ ಸೇನೆಯ ಮಾಜಿ ಹವಾಲ್ದಾರ್ ಮುನ್ನಾವರ್ ಅಹ್ಮದ್ ಮೀರ್ ನನ್ನು ಕೂಡ ಶುಕ್ರವಾರ ಪೊಲೀಸರು ಬಂಧಿಸಿದ್ದರು.

ಪೊಲೀಸರ ಪ್ರಕಾರ ಖಾನ್ ಮತ್ತು ಮೀರ್ ಸಂಪರ್ಕಕ್ಕೆ ಸಬರ್ ಸಹಾಯ ಮಾಡಿದ್ದ ಎನ್ನಲಾಗಿದೆ.

ಈ ಎಲ್ಲಾ ಆಪಾದಿತರನ್ನು ದೆಹಲಿಗೆ ಕರೆತಂದು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT