ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರು (ಚಿತ್ರ- ಎಎನ್ ಐ) 
ದೇಶ

ನಕಲಿ ಮದ್ಯ ಸೇವಿಸಿ ಐವರು ಸಾವು, 21 ಮಂದಿ ಅಸ್ವಸ್ಥ

ಬಾರ್‌ವೊಂದರಲ್ಲಿ ನಕಲಿ ಮದ್ಯ ಸೇವಿಸಿ ಐವರು ಮೃತಪಟ್ಟ ಹಾಗೂ 21 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಧಾರುಣ ಘಟನೆ ವಿಜಯವಾಡದ ಕೃಷ್ಣಲಂಕ...

ವಿಜಯವಾಡ: ಬಾರ್‌ವೊಂದರಲ್ಲಿ ನಕಲಿ ಮದ್ಯ ಸೇವಿಸಿ ಐವರು ಮೃತಪಟ್ಟ ಹಾಗೂ 21 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ದಾರುಣ ಘಟನೆ ವಿಜಯವಾಡದ ಕೃಷ್ಣಲಂಕ ಪ್ರದೇಶದಲ್ಲಿ ನಡೆದಿದೆ.

ಇಂದು ಬೆಳಗ್ಗೆ 9.30ರ ಸುಮಾರಿಗೆ ಮದ್ಯ ಸೇವಿಸಿ ಸ್ವರ್ಣ ಬಾರ್‌ನಿಂದ ಹೊರ ಮೂವರ ಪೈಕಿ ಒಬ್ಬ ರಸ್ತೆಯಲ್ಲಿ ಕುಸಿದು ಬಿದ್ದರೆ, ಮತ್ತಿಬ್ಬರು ಸ್ವಲ್ಪ ದೂರದಲ್ಲಿ ಕುಸಿದು ಬಿದ್ದಿದ್ದಾರೆ.

ರಸ್ತೆಯಲ್ಲಿ ಕುಸಿದು ಬಿದ್ದಿದ್ದ ಈ ಮೂವರನ್ನು ಗಮನಿಸಿದ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಪರೀಶಿಲನೆ ನಡೆಸಿದರು. ಈ ವೇಳೆ ನಕಲಿ ಮದ್ಯ ಸೇವಿಸಿ ಮತ್ತಿಬ್ಬರು ಮೃಪಟ್ಟಿರುವುದು ಪತ್ತೆಯಾಗಿದ್ದು, ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಸ್ವರ್ಣ ಬಾರ್‌ನಲ್ಲಿ ಮದ್ಯ ಸೇವಿಸಿದ 21ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಪೈಕಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಮೃತಪಟ್ಟವರನ್ನು ಅಕುಲ್ ವಿಜಯ್ ಕುಮಾರ್, ನರಸ ಗೋಪಿ, ಮೀಸಲ ಮಹೇಶ್, ಮುನಗಲ ಶಂಕರ್ ರಾವ್ ಹಾಗೂ ಎನ್‌ಬಿಬಿವಿ ನಂಚರಯ್ಯ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ನೆಹರು ನಗರ ಹಾಗೂ ರಣದೇವಿ ನಗರದ ನಿವಾಸಿಗಳಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT