ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರು (ಚಿತ್ರ- ಎಎನ್ ಐ) 
ದೇಶ

ನಕಲಿ ಮದ್ಯ ಸೇವಿಸಿ ಐವರು ಸಾವು, 21 ಮಂದಿ ಅಸ್ವಸ್ಥ

ಬಾರ್‌ವೊಂದರಲ್ಲಿ ನಕಲಿ ಮದ್ಯ ಸೇವಿಸಿ ಐವರು ಮೃತಪಟ್ಟ ಹಾಗೂ 21 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಧಾರುಣ ಘಟನೆ ವಿಜಯವಾಡದ ಕೃಷ್ಣಲಂಕ...

ವಿಜಯವಾಡ: ಬಾರ್‌ವೊಂದರಲ್ಲಿ ನಕಲಿ ಮದ್ಯ ಸೇವಿಸಿ ಐವರು ಮೃತಪಟ್ಟ ಹಾಗೂ 21 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ದಾರುಣ ಘಟನೆ ವಿಜಯವಾಡದ ಕೃಷ್ಣಲಂಕ ಪ್ರದೇಶದಲ್ಲಿ ನಡೆದಿದೆ.

ಇಂದು ಬೆಳಗ್ಗೆ 9.30ರ ಸುಮಾರಿಗೆ ಮದ್ಯ ಸೇವಿಸಿ ಸ್ವರ್ಣ ಬಾರ್‌ನಿಂದ ಹೊರ ಮೂವರ ಪೈಕಿ ಒಬ್ಬ ರಸ್ತೆಯಲ್ಲಿ ಕುಸಿದು ಬಿದ್ದರೆ, ಮತ್ತಿಬ್ಬರು ಸ್ವಲ್ಪ ದೂರದಲ್ಲಿ ಕುಸಿದು ಬಿದ್ದಿದ್ದಾರೆ.

ರಸ್ತೆಯಲ್ಲಿ ಕುಸಿದು ಬಿದ್ದಿದ್ದ ಈ ಮೂವರನ್ನು ಗಮನಿಸಿದ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಪರೀಶಿಲನೆ ನಡೆಸಿದರು. ಈ ವೇಳೆ ನಕಲಿ ಮದ್ಯ ಸೇವಿಸಿ ಮತ್ತಿಬ್ಬರು ಮೃಪಟ್ಟಿರುವುದು ಪತ್ತೆಯಾಗಿದ್ದು, ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಸ್ವರ್ಣ ಬಾರ್‌ನಲ್ಲಿ ಮದ್ಯ ಸೇವಿಸಿದ 21ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಪೈಕಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಮೃತಪಟ್ಟವರನ್ನು ಅಕುಲ್ ವಿಜಯ್ ಕುಮಾರ್, ನರಸ ಗೋಪಿ, ಮೀಸಲ ಮಹೇಶ್, ಮುನಗಲ ಶಂಕರ್ ರಾವ್ ಹಾಗೂ ಎನ್‌ಬಿಬಿವಿ ನಂಚರಯ್ಯ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ನೆಹರು ನಗರ ಹಾಗೂ ರಣದೇವಿ ನಗರದ ನಿವಾಸಿಗಳಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT