ಸಿಪಿಐ ಹಿರಿಯ ನಾಯಕ ಎ.ಬಿ. ಬರ್ದಾನ್ (ಸಂಗ್ರಹ ಚಿತ್ರ) 
ದೇಶ

ಪಾರ್ಶ್ವವಾಯುವಿಗೆ ತುತ್ತಾದ ಸಿಪಿಐ ನಾಯಕ ಎ.ಬಿ. ಬರ್ದಾನ್: ಆಸ್ಪತ್ರೆಗೆ ದಾಖಲು

ಸಿಪಿಐ ಹಿರಿಯ ನಾಯಕ ಎ.ಬಿ. ಬರ್ದಾನ್ ಅವರಿಗೆ ಪಾರ್ಶ್ವವಾಯು ಉಂಟಾಗಿದ್ದು, ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ...

ನವದೆಹಲಿ: ಸಿಪಿಐ ಹಿರಿಯ ನಾಯಕ ಎ.ಬಿ. ಬರ್ದಾನ್ ಅವರಿಗೆ ಪಾರ್ಶ್ವವಾಯು ಉಂಟಾಗಿದ್ದು, ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

92 ವರ್ಷದ ಎ.ಬಿ.ಬರ್ದಾನ್ ಅವರು ಸಿಪಿಐನ ಪ್ರಧಾನಕಾರ್ಯಾಲಯದಲ್ಲಿ ನೆಲೆಸಿದ್ದರು. ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಅವರು ಪ್ರಜ್ಞೆಯನ್ನು ಕಳೆದುಕೊಂಡಿದ್ದಾರೆ. ನಂತರ ಅವರನ್ನು ದೆಹಲಿಯ ಜಿ.ಬಿ.ಪಂತ್ ಆಸ್ಪತ್ರೆಗೆ ದಾಖಲಿಸಲಾಯಿತುಎಂದು ಸಿಪಿಐ ನಾಯಕ ಅತುಲ್ ಕುಮಾರ್ ಅಂಜನ್ ಅವರು ಹೇಳಿದ್ದಾರೆ.

ಪ್ರಸ್ತುತ ಬರ್ದಾನ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯ ಹಿರಿಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆಂದು ಸಿಪಿಐನ ಮಾಜಿ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.

ಬರ್ದಾನ್ ಅವರ ಪತ್ನಿ ನಾಗ್ಪುರ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಪಕರಾಗಿ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ನಿಧನರಾಗಿದ್ದು. ದಂಪತಿಗೆ ಓರ್ವ ಪುತ್ರ ಹಾಗೂ ಪುತ್ರಿಯಿದ್ದಾರೆ.  ಅರ್ಧೆಂದು ಭೂಷಣ್ ಬರ್ದಾನ್ ಅವರು ಮಹಾರಾಷ್ಟ್ರ ವೃತ್ತಿ ಸಂಘಟನೆ ಚಳುವಳಿಯ ಪ್ರಮುಖ ವ್ಯಕ್ತಿಯಾಗಿದ್ದರು ಮತ್ತು ನಂತರ ರಾಜಕೀಯದಿಂದ ದೂರಾದ ಅವರು, 1957ರಲ್ಲಿ ಮಹಾರಾಷ್ಟ್ರ ವಿಧಾಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಗೆಲವು ಸಾಧಿಸಿದ್ದರು.

ನಂತರ ಸಿಪಿಐನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಇವರು, ಕಾಂಗ್ರೆಸ್ ನ ಅಖಿಲ ಭಾರತ ವ್ಯಾಪಾರ ಒಕ್ಕೂಟ ಅಧ್ಯಕ್ಷರಾದರು.ನಂತರ ಈ ಒಕ್ಕೂಟ ಭಾರತದ ಅತ್ಯಂತ ಹಳೆಯ ವ್ಯಾಪಾರಿ ಒಕ್ಕೂಡವಾಗಿ ಬೆಳೆಯಿತು.  ನಂತರ ದೆಹಲಿ ರಾಜಕೀಯಕ್ಕೆ ಇಳಿದ ಅವರು, 1990ರಲ್ಲಿ ಸಿಪಿಐನ ಉಪ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT