ಪಾಂಡಿಚೆರಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ (ಫೋಟೋ ಕೃಪೆ: ಎಎನ್ಐ) 
ದೇಶ

ರಾಜಕೀಯ ಮಾಡೋದು ಬಿಡಿ, ಮೊದ್ಲು ಪರಿಹಾರ ತಲುಪಿದ್ಯಾ ನೋಡಿ: ರಾಹುಲ್ ಗಾಂಧಿ

ನಾಯಕರು ರಾಜಕೀಯ ಮಾಡುವುದನ್ನು ಬಿಟ್ಟು, ಪರಿಹಾರಗಳು ಜನತೆಗೆ ತಲುಪುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಹೇಳಿದ್ದಾರೆ...

ಚೆನ್ನೈ: ನಾಯಕರು ರಾಜಕೀಯ ಮಾಡುವುದನ್ನು ಬಿಟ್ಟು, ಪರಿಹಾರಗಳು ಜನತೆಗೆ ತಲುಪುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಹೇಳಿದ್ದಾರೆ.

ಕುಂಭದ್ರೋಣ ಮಳೆಯಿಂದಾಗಿ ಚೆನ್ನೈ ನಗರ ಜಲಾವೃತ್ತವಾದ ಹಿನ್ನಲೆಯಲ್ಲಿ ಇಂದು ತಮಿಳುನಾಡಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿಯವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರೀಕ್ಷೆ ನಡೆಸಿದರು. ಈ ವೇಳೆ ಮಾತನಾಡಿರುವ ಅವರು, ತಮಿಳುನಾಡಿನಲ್ಲಿ ಪ್ರಸ್ತುತ ಇರುವ ಸ್ಥಿತಿಗತಿಗಳನ್ನು ನನ್ನ ಕಣ್ಣಿಂದ ನೋಡಲು ಇಲ್ಲಿಗೆ ಬಂದಿದ್ದೇನೆ. ಪ್ರಸ್ತುತ ತಮಿಳುನಾಡಿನಲ್ಲಿರುವ ಸ್ಥಿತಿಯಲ್ಲಿ ನಾಯಕರು ರಾಜಕೀಯ ಮಾಡುವುದನ್ನು ಬಿಟ್ಟು ಜನರಿಗೆ ಪರಿಹಾರ ನಿಧಿಗಳು ತಲುಪುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಶತಮಾನದ ಭೀಕರ ಕುಂಭದ್ರೋಣ ಮಳೆಯಿಂದ ತತ್ತರಿಸಿರುವ ತಮಿಳುನಾಡಿನಲ್ಲಿ ಸಾಕಷ್ಟು ಹಾನಿಯುಂಟಾಗಿದ್ದು,  ಮಳೆಯಿಂದಾಗಿ ಚೆನ್ನೈ ನಗರಿ ತತ್ತರಿಸಿ ಹೋಗಿದೆ. ಹೀಗಾಗಿ ಪ್ರವಾಹ ಪೀಡಿತ ತಮಿಳುನಾಡಿನಲ್ಲಿ ಸಾಕಷ್ಟು ಪ್ರದೇಶಗಳು ಜಲಾವೃತವಾಗಿದ್ದು, ಶೈಕ್ಷಣಿಕ ಸಂಸ್ಥೆಗಳು, ಶಾಲೆ ಮತ್ತು ಕಾಲೆಗಳಿಗೆ ರಜೆಯನ್ನು ಮುಂದುವರೆಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT