ದೇಶ

ಸಂಸತ್ ಕಲಾಪ ನಡೆಯದಿರುವುದು ದುಃಖದ ಸಂಗತಿ: ಪ್ರಧಾನಿ ಮೋದಿ

Shilpa D

ನವದೆಹಲಿ: ಸಂಸತ್ತಿನ ಉಭಯ ಸದನಗಳ ಕಲಾಪ ನಡೆಯದೇ ಸಮಯ ವ್ಯರ್ಥವಾಗುತ್ತಿರುವುದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೇಲ್ಮನೆ ಮತ್ತು ಕೆಳಮನೆಗಳ ಸದನಗಳ ಸುಗಮ ಕಲಾಪಕ್ಕೆ ಅಡ್ಡಿಪಡಿಸುತ್ತಿರುವುದು ದುಃಖದ ವಿಷಯ ಎಂದು ಮೋದಿ ಅಭಿಪ್ರಾಯ ಪಟ್ಟಿದ್ದಾರೆ.

ಪ್ರಜಾಪ್ರಭುತ್ವ ಎಂಬುದು ಚುನಾವಣೆ ಮತ್ತು ಸರ್ಕಾರಕ್ಕೆ ಮಾತ್ರ ಸೀಮಿತವಾದುದ್ದಲ್ಲ, ಎಲ್ಲರೂ ದೇಶದ ಪ್ರಗತಿಗೆ, ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಮೋದಿ ಹೇಳಿದ್ದಾರೆ.

ಭಾರತದ ಅಭಿವೃದ್ಧಿ ಪಯಣ ಎಂಬುದು ಸಾಮೂಹಿಕ ಚಳುವಳಿಯಾಗಬೇಕು ಎಂಬುದನ್ನು ನಾನು ಬಯಸುತ್ತೇನೆ ಎಂದು ಹೇಳಿರುವ ಮೋದಿ, ಜಿಎಸ್ ಟಿ ಬಿಲ್  ಸಂಸತ್ತಿನಲ್ಲಿ  ತೀರ್ಮಾನವಾಗದೇ ಹಾಗೆಯೇ ಉಳಿದಿದೆ ಎಂದು ಹೇಳಿದ ಮೋದ್, ಜನರ ಸಾಮರ್ಥ್ಯದ ಮೇಲೆ ನಂಬಿಕೆ ಇಡಬೇಕು ಎಂದು ಹೇಳಿದರು. .

SCROLL FOR NEXT