ಚೆನ್ನೈ ಸಂತ್ರಸ್ತರಿಗೆ ಸಹಾಯ 
ದೇಶ

ಚೆನ್ನೈನಲ್ಲಿ ಮಳೆ ಕಮ್ಮಿ ಆಯ್ತು, ಆದರೆ ಅಲ್ಲಿನ ಜನರ ಮಾನಸಿಕ ಸಂಕಷ್ಟಗಳು ಕಡಿಮೆಯಾಗಿಲ್ಲ

ಅಲ್ಲಿ ಈಗ ಮಳೆಯೂ ಕಡಿಮೆಯಾಗಿದೆ. ಆದರೆ ಅಲ್ಲಿನ ಜನರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಮಳೆಯಿಂದಾಗಿ ತಮ್ಮ ಮನೆ, ಬಂಧುಗಳನ್ನು...

ಚೆನ್ನೈ: ಜಲಪ್ರಳಯಕ್ಕೆ ತುತ್ತಾಗಿದ್ದ ಚೆನ್ನೈನಲ್ಲಿ ಈಗ ಪರಿಸ್ಥಿತಿ ಸಹಜ ಸ್ಥಿತಿಗೆ ಬರತೊಡಗಿದೆ. ಅಲ್ಲಿ ಈಗ ಮಳೆಯೂ ಕಡಿಮೆಯಾಗಿದೆ. ಆದರೆ ಅಲ್ಲಿನ ಜನರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಮಳೆಯಿಂದಾಗಿ ತಮ್ಮ ಮನೆ, ಬಂಧುಗಳನ್ನು ಕಳೆದುಕೊಂಡ ಕುಟುಂಬಗಳು ಈಗ ಮಾನಸಿಕ ಸಾಂತ್ವನವನ್ನು ಬಯಸಿ ಮನಶಾಸ್ತ್ರಜ್ಞರನ್ನು ಭೇಟಿ ಮಾಡತೊಡಗಿವೆ.
ಜಲಪ್ರಳಯದ ಸಂತ್ರಸ್ತರು ಮನಶಾಸ್ತ್ರಜ್ಞರಿಗೆ ಫೋನ್ ಮಾಡಿ ಅವರ ತೊಳಲಾಟವನ್ನು ಹೇಳುತ್ತಿದ್ದಾರೆ. ತಮ್ಮ ನಷ್ಟಗಳನ್ನು ಭರಿಸಿಕೊಳ್ಳಲು ಒದ್ದಾಡುವವರು ಒಂದೆಡೆಯಾದರೆ, ಆಘಾತದಿಂದ ಹೊರಬರಲು ಆಗದೆ ಸಂಕಷ್ಟಕ್ಕೀಡಾದವರು ಒಂದೆಡೆ. ಇಂಥಾ ಜನರು ನಮ್ಮನ್ನು ಸಮೀಪಿಸಿ ಪರಿಹಾರವನ್ನು ಕೇಳುತ್ತಿದ್ದಾರೆ ಅಂತಾರೆ ಅಲ್ಲಿನ ಆಪ್ತ ಸಲಹೆಗಾರರು.
ಒಬ್ಬ ಮಹಿಳೆಯ ಮಾವ ಜಲಪ್ರಳಯದಲ್ಲಿ ಸಾವನ್ನಪ್ಪಿದ್ದರು. ಆ ಶವವನ್ನು ಎರಡು ದಿನಗಳ ಕಾಲ ಅಪಾರ್ಟ್‌ಮೆಂಟ್‌ನಲ್ಲೇ ಇರಿಸಲಾಗಿತ್ತು. ಎಕ್ಕಾಂಟುಗಲ್ ನಲ್ಲಿರುವ ಅವರ ಮನೆಗೆ ರಕ್ಷಣಾ ಕಾರ್ಯಕರ್ತರು ತಲುಪಬೇಕಾದರೆ ಎರಡು ದಿನಗಳೇ ಬೇಕಾಗಿ ಬಂತು. ನನ್ನ ಪತಿ  ಮನೆಯಲ್ಲಿರಲಿಲ್ಲ. ಎರಡು ದಿನ ಶವವನ್ನು ಒಂದು ಕೊಠಡಿಯಲ್ಲಿ ಬಂದ್ ಮಾಡಿ ನಾನು ಮತ್ತು ಮಕ್ಕಳು ಅನುಭವಿಸಿದ ವೇದನೆ ನಮಗಷ್ಟೇ ಗೊತ್ತು ಎಂದು ಆಕೆ ಫೋನ್ ಮಾಡಿ ಅತ್ತಿದ್ದಳು ಅಂತಾರೆ ಓರ್ವ ಆಪ್ತಸಲಹೆಗಾರ್ತಿ. 
ಆಪ್ತ ಸಲಹೆಗಾರರಿಗೆ ಬರುವ ಫೋನ್‌ಗಳಲ್ಲಿ ಹೆಚ್ಚಿನವು ಇಂಥದ್ದೇ ವಿಷಯಗಳಿಗೆ ಸಂಬಂಧಿಸಿದ್ದವುಗಳಾಗಿವೆ.
ಜಲಪ್ರಳಯದ ಹೊತ್ತಲ್ಲಿ ಅಲ್ಲಿನ ಜನರು ತಮ್ಮ ಅಸ್ತಿತ್ವಕ್ಕೋಸ್ಕರ ಹೋರಾಡುತ್ತಿದ್ದರು. ಮಳೆ ನಿಂತ ಮೇಲೆ ಈಗ ಅವರು ಖಿನ್ನತೆಗೊಳಗಾಗಿ ಮಾನಸಿಕ ತೊಳಲಾಟದಲ್ಲಿದ್ದಾರೆ. ಅವರಿಗೆ ಈಗ ಸಾಂತ್ವನ ಮತ್ತು ಧೈರ್ಯ ತುಂಬುವವರು ಬೇಕಾಗಿದ್ದಾರೆ. ಮಾನಸಿಕ ಸಂಘರ್ಷಗಳಿಂದ ಅವರನ್ನು ಹೊರತಂದು ಅವರಿಗೆ ಸಹಾಯ ಮಾಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ಅಲ್ಲಿನ ಮನಶಾಸ್ತ್ರಜ್ಞರು ಹೇಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT