ಪ್ರತಿಭಟನಾ ನಿರತ ಮುಸ್ಲಿಮರು 
ದೇಶ

ಕಮಲೇಶ್ ತಿವಾರಿಯನ್ನು ಗಲ್ಲಿಗೇರಿಸಲು ಮುಸ್ಲಿಮರ ಒತ್ತಾಯ

ಹಿಂದೂ ಮಹಾಸಭಾ ಕಾರ್ಯಕರ್ತ ಕಮಲೇಶ್ ತಿವಾರಿಯನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ 1ಲಕ್ಷ ಮುಸ್ಲಿಮರು ಉತ್ತರ ಪ್ರದೇಶ ಮುಜಾಫರ್ ನಗರದಲ್ಲಿ ಪ್ರತಿಭಟನೆ ನಡೆಸಿದರು....

ಮುಜಾಫರ್ ನಗರ; ಮುಸ್ಲಿಮರ ಬಗ್ಗೆ ಹಾಗೂ ಪ್ರವಾದಿ ಮಹಮದ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಹಿಂದೂ ಮಹಾಸಭಾ ಕಾರ್ಯಕರ್ತ ಕಮಲೇಶ್ ತಿವಾರಿಯನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ 1ಲಕ್ಷ ಮುಸ್ಲಿಮರು ಉತ್ತರ ಪ್ರದೇಶ ಮುಜಾಫರ್ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರವಾದಿ ಮಹಮದ್ ಬಗ್ಗೆ ಒಂದು ಮಾತು ಕೆಟ್ಟದ್ದಾಗಿ ಹೇಳಿದರು ನಾವು ಸಹಿಸುವುದಿಲ್ಲ. ತಿವಾರಿ ಹೇಳಿಕೆಯಿಂದ ನಮ್ಮ ಭಾವನೆಗಳಿಗೆ ನೋವುಂಟಾಗಿದೆ, ಹೀಗಾಗಿ ಕಮಲೇಶ್ ತಿವಾರಿಯನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ ಮುಸ್ಲಿಂ ವ್ಯಾಪಾರಿಗಳೆಲ್ಲಾ ತಮ್ಮ ವ್ಯಾಪಾರ ವಹಿವಾಟು ಬಂದ್ ಮಾಡಿ ಹೋರಾಟಗಾರ ಮೌಲಾನಾ ಖಾಲಿದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಕಮಲೇಶ್ ತಿವಾರಿ ಅಲ್ಪಸಂಖ್ಯಾತ ಸಮುದಾಯಗಳ ಬಗ್ಗೆ ಅವಹಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶದ ಹಲವು ಕಡೆ ಪ್ರತಿಭಟನೆಗಳು ನಡೆದವು.

ಮುನ್ನೆಚ್ಚರಿಕಾ ಕ್ರಮವಾಗಿ ಮುಜಾಫರ್ ನಗರದಲ್ಲಿ ಬಿಗಿಭದ್ರತೆ ಒದಗಿಸಲಾಗಿದ್ದು, ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT