ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ಪ್ಯಾರಿಸ್ ಒಪ್ಪಂದ 'ಹವಾಮಾನ ನೀತಿ'ಯ ಗೆಲುವು: ನರೇಂದ್ರ ಮೋದಿ

ಕಳೆದ ರಾತ್ರಿ ಪ್ಯಾರಿಸ್ ನಲ್ಲಿ ಮುಕ್ತಾಯಗೊಂಡ ಹವಾಮಾನ ಬದಲಾವಣೆ ಒಪ್ಪಂದ ಒಂದು ಮೈಲಿಗಲ್ಲಾಗಿದ್ದು, ಇಲ್ಲಿ ಯಾರಿಗೂ ಸೋಲು ಅಥವಾ ಗೆಲುವು...

ನವದೆಹಲಿ: ಕಳೆದ ರಾತ್ರಿ ಪ್ಯಾರಿಸ್ ನಲ್ಲಿ ಮುಕ್ತಾಯಗೊಂಡ ಹವಾಮಾನ ಬದಲಾವಣೆ ಒಪ್ಪಂದ ಒಂದು ಮೈಲಿಗಲ್ಲಾಗಿದ್ದು, ಇಲ್ಲಿ ಯಾರಿಗೂ ಸೋಲು ಅಥವಾ ಗೆಲುವು ಉಂಟಾಗಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ಯಾರಿಸ್ ಒಪ್ಪಂದದಲ್ಲಿ ಫಲಿತಾಂಶದಲ್ಲಿ ಯಾರಿಗೂ ಸೋಲು ಅಥವಾ ಗೆಲುವು ಉಂ ಟಾಗಿಲ್ಲ. ಹವಾಮಾನ ನೀತಿ ಗೆದ್ದುಕೊಂಡಿದೆ ಮತ್ತು ನಾವೆಲ್ಲರೂ ಭವಿಷ್ಯದಲ್ಲಿ ಹಸಿರು ಉತ್ತಮ ಪರಿಸರಕ್ಕಾಗಿ ಕೆಲಸ ಮಾಡಬೇಕಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಪ್ಯಾರಿಸ್ ನಲ್ಲಿ ತೆಗೆದುಕೊಂಡ ನಿರ್ಣಯದಲ್ಲಿ ಜಾಗತಿಕ ತಾಪಮಾನವನ್ನು 2 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆ ಮಾಡಲು ಮತ್ತು ಅಭಿವೃದ್ಧಿಶೀಲ ದೇಶಗಳು ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಸಹಾಯ ಮಾಡುವಂತೆ ಒಪ್ಪಂದದಲ್ಲಿ ಸೂಚಿಸಲಾಗಿದೆ.

ವಿಶ್ವದಲ್ಲಿ ಹವಾಮಾನ ಬದಲಾವಣೆ ಒಂದು ಸವಾಲಾಗಿದೆ. ಜಾಗತಿಕ ತಾಪಮಾನವನ್ನು ಕುಗ್ಗಿಸಿ ವಾತಾವರಣವನ್ನು ನಿರ್ಮಲಗೊಳಿಸಬೇಕೆಂದು ನಿರ್ಧರಿಸಿ ಎಲ್ಲಾ ದೇಶಗಳು ನಿರ್ಣಯ ಕೈಗೊಂಡಿರುವುದು ಉತ್ತಮ ಬೆಳವಣಿಗೆ ಎಂದು ಕೂಡ ಪ್ರಧಾನಿ ಟ್ವೀಟ್ ನಲ್ಲಿ ವಿವರಿಸಿದ್ದಾರೆ. ಹವಾಮಾನ ಬದಲಾವಣೆಗೆ ಸಾಮೂಹಿಕ ಬುದ್ಧಿವಂತಿಕೆ ತೋರಿಸುವುದು ಕೂಡ ಶ್ಲಾಘನೀಯವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT