ದೇಶ

ಗುಡಿಸಲು ತೆರವು ಕಾರ್ಯಾಚರಣೆಗೂ ಮುನ್ನವೇ ಮಗು ಮೃತಪಟ್ಟಿತ್ತು: ರೈಲ್ವೆ ಸಚಿವ ಸುರೇಶ್ ಪ್ರಭು

ನವದೆಹಲಿಯಲ್ಲಿ ಗುಡಿಸಲು ತೆರವು ಕಾರ್ಯಾಚರಣೆ ವೇಳೆ ಮಗುವೊಂದು ಮೃತಪಟ್ಟಿರುವುದಕ್ಕೆ ರೈಲ್ವೆ ಇಲಾಖೆ ಕಾರಣ ಅಲ್ಲ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ಸಂಸತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ಗುಡಿಸಲು ತೆರವು ಕಾರ್ಯಾಚರಣೆ ವೇಳೆ ಮಗುವೊಂದು ಮೃತಪಟ್ಟಿರುವುದಕ್ಕೆ ರೈಲ್ವೆ ಇಲಾಖೆ ಕಾರಣ ಅಲ್ಲ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ಸಂಸತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ದೆಹಲಿಯ ಶಕೂರ್ ಬಸ್ತಿ ಎಂಬಲ್ಲಿ ಸುಮಾರು 1200 ಕೊಳೆಗೇರಿ ಗುಡಿಸಲುಗಳಿದ್ದವು. ಇವುಗಳನ್ನು ರೈಲ್ವೆ ಇಲಾಖೆಗೆ ಸೇರಿದ ಜಾಗವನ್ನು ಒತ್ತುವರಿ  ಮಾಡಿ ನಿರ್ಮಿಸಲಾಗಿದೆ ಎಂಬ ಕಾರಣ  ನೀಡಿ ಇಲಾಖೆ ತೆರವು ಕಾರ್ಯಾಚರಣೆ ನಡೆಸಿತು. ಈ ವೇಳೆ ಆರು ತಿಂಗಳ ಮಗುವೊಂದು ಮೃತಪಟ್ಟಿತ್ತು. ಈ ಘಟನೆ ರೈಲ್ವೆ ಇಲಾಖೆ ಮತ್ತು ದೆಹಲಿ ಸರ್ಕಾರದ ನಡುವೆ ಗುದ್ದಾಟಕ್ಕೆ ಕಾರಣವಾಗಿದ್ದು, ಘಟನೆಗೆ ರೈಲ್ವೆ ಇಲಾಖೆ ಕಾರಣವಲ್ಲ, ಕಾರ್ಯಾಚರಣೆಗೂ ಮುನ್ನವೇ ಮಗು ಮೃತಪಟ್ಟಿತ್ತು ಎಂದು ಸುರೇಶ್ ಪ್ರಭು ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.  
ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ತೆರವುಗೊಳಿಸುವಂತೆ ಹಲವು ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ಆದರೂ ಸಹ ಒತ್ತುವರಿ ಮಾಡಿಕೊಂಡವರು ಜಾಗ ಬಿಟ್ಟು ಹೋಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನಡೆದ ತೆರವು ಕಾರ್ಯಾಚರಣೆ ಶಾಂತಿಯುತವಾಗಿತ್ತು. ಮಾಧ್ಯಮಗಳು ವರದಿ ಮಾಡಿದಂತೆ ಮಧ್ಯ ರಾತ್ರಿ ವೇಳೆ ಕಾರ್ಯಾಚರಣೆ ನಡೆಸಲಾಗಿಲ್ಲ ಎಂದು ಸುರೇಶ್ ಪ್ರಭು ಹೇಳಿದ್ದಾರೆ. ಕಾರ್ಯಾಚರಣೆ ವೇಳೆ ಮಗು ಮೃತಪಟ್ಟಿದ್ದನ್ನು ಖಂಡಿಸಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿ ವಾಲ್‌, ರೈಲ್ವೆ ಇಲಾಖೆ ವಿರುದ್ಧ ಹತ್ಯೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT