ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ರಾಷ್ಟ್ರಪತಿಗಳ ಸಾಮರಸ್ಯದ ಮಾತು

ಪ್ರತಿ ನಾಗರಿಕನೂ ಯಾವುದೇ ಭಯ ಮತ್ತು ಪೂರ್ವಗ್ರಹವಿಲ್ಲದೆ ನೆಮ್ಮದಿಯ ಜೀವನ ನಡೆಸುವುದು ಸಾಧ್ಯವಾದರೆ ದೇಶದ ಸಾಮಾಜಿಕ ...

ಕೋಲ್ಕತ್ತಾ: ಪ್ರತಿ ನಾಗರಿಕನೂ ಯಾವುದೇ ಭಯ ಮತ್ತು ಪೂರ್ವಗ್ರಹವಿಲ್ಲದೆ ನೆಮ್ಮದಿಯ ಜೀವನ ನಡೆಸುವುದು ಸಾಧ್ಯವಾದರೆ ದೇಶದ ಸಾಮಾಜಿಕ ಸಾಮರಸ್ಯ ಗಟ್ಟಿಯಾಗಿ ಉಳಿಯಲು ಸಾಧ್ಯ ಎನ್ನುವ ಮೂಲಕ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತೀಯ ಸಮಾಜದ ಬಹುತ್ವದ ಮಹತ್ವವನ್ನು ಪುನರುಚ್ಛರಿಸಿದ್ದಾರೆ. 

ಸಹನೆ. ಸಹಬಾಳ್ವೆ ಹಾಗೂ ಭಿನ್ನ ಜೀವನ ಶೈಲಿ ಹಾಗೂ ಭಿನ್ನ ಅಭಿರುಚಿಗಳನ್ನು ಗೌರವಿಸುವುದು ನಮ್ಮ ಭಾರತೀಯತೆಯ ಅವಿಭಾಜ್ಯ ಲಕ್ಷಣಗಳು. ಜಾತಿ, ಮತ, ಧರ್ಮ, ಭಾಷೆ, ಪ್ರದೇಶಗಳ ಮಿತಿಗಳನ್ನು ಮೀರಿ ಎಲ್ಲ ಭಾರತೀಯರು ಸಹಜೀವನ ನಡೆಸುವುದು ಮುಖ್ಯ. ಆಗ ಮಾತ್ರ ಸಾಮಾಜಿಕ ಸಾಮರಸ್ಯ ಉಳಿಯಲಿದೆ ಎಂದು ಕೊಲ್ಕತ್ತಾ ಡಯೋಸಿಸ್‍ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ಹೇಳಿದ್ದಾರೆ. 
ದಾದ್ರಿ ಘಟನೆ ಹಾಗೂ ದೇಶದಲ್ಲಿ ಕೇಳಿಬರುತ್ತಿರುವ ಅಸಹಿಷ್ಣುತೆಯ ವಿವಾದದ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಕಳೆದ ಒಂದು ತಿಂಗಳಲ್ಲಿ ಎರಡನೇ ಬಾರಿ ದೇಶದ ಸಾಮರಸ್ಯದ ಬಗ್ಗೆ ಮಾತನಾಡಿರುವುದು ಗಮನಾರ್ಹ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT