ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ರಾಷ್ಟ್ರಪತಿಗಳ ಸಾಮರಸ್ಯದ ಮಾತು

ಪ್ರತಿ ನಾಗರಿಕನೂ ಯಾವುದೇ ಭಯ ಮತ್ತು ಪೂರ್ವಗ್ರಹವಿಲ್ಲದೆ ನೆಮ್ಮದಿಯ ಜೀವನ ನಡೆಸುವುದು ಸಾಧ್ಯವಾದರೆ ದೇಶದ ಸಾಮಾಜಿಕ ...

ಕೋಲ್ಕತ್ತಾ: ಪ್ರತಿ ನಾಗರಿಕನೂ ಯಾವುದೇ ಭಯ ಮತ್ತು ಪೂರ್ವಗ್ರಹವಿಲ್ಲದೆ ನೆಮ್ಮದಿಯ ಜೀವನ ನಡೆಸುವುದು ಸಾಧ್ಯವಾದರೆ ದೇಶದ ಸಾಮಾಜಿಕ ಸಾಮರಸ್ಯ ಗಟ್ಟಿಯಾಗಿ ಉಳಿಯಲು ಸಾಧ್ಯ ಎನ್ನುವ ಮೂಲಕ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತೀಯ ಸಮಾಜದ ಬಹುತ್ವದ ಮಹತ್ವವನ್ನು ಪುನರುಚ್ಛರಿಸಿದ್ದಾರೆ. 

ಸಹನೆ. ಸಹಬಾಳ್ವೆ ಹಾಗೂ ಭಿನ್ನ ಜೀವನ ಶೈಲಿ ಹಾಗೂ ಭಿನ್ನ ಅಭಿರುಚಿಗಳನ್ನು ಗೌರವಿಸುವುದು ನಮ್ಮ ಭಾರತೀಯತೆಯ ಅವಿಭಾಜ್ಯ ಲಕ್ಷಣಗಳು. ಜಾತಿ, ಮತ, ಧರ್ಮ, ಭಾಷೆ, ಪ್ರದೇಶಗಳ ಮಿತಿಗಳನ್ನು ಮೀರಿ ಎಲ್ಲ ಭಾರತೀಯರು ಸಹಜೀವನ ನಡೆಸುವುದು ಮುಖ್ಯ. ಆಗ ಮಾತ್ರ ಸಾಮಾಜಿಕ ಸಾಮರಸ್ಯ ಉಳಿಯಲಿದೆ ಎಂದು ಕೊಲ್ಕತ್ತಾ ಡಯೋಸಿಸ್‍ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ಹೇಳಿದ್ದಾರೆ. 
ದಾದ್ರಿ ಘಟನೆ ಹಾಗೂ ದೇಶದಲ್ಲಿ ಕೇಳಿಬರುತ್ತಿರುವ ಅಸಹಿಷ್ಣುತೆಯ ವಿವಾದದ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಕಳೆದ ಒಂದು ತಿಂಗಳಲ್ಲಿ ಎರಡನೇ ಬಾರಿ ದೇಶದ ಸಾಮರಸ್ಯದ ಬಗ್ಗೆ ಮಾತನಾಡಿರುವುದು ಗಮನಾರ್ಹ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT