ಒಆರ್ ಒಪಿಗಾಗಿ ಪ್ರತಿಭಟನೆ ನಡೆಸುತ್ತಿರುವ ನಿವೃತ್ತ ಯೋಧರು 
ದೇಶ

ಒಆರ್ ಒಪಿ ಯೋಜನೆಯ ಏಕ ಸದಸ್ಯ ಸಮಿತಿ ವಿರೋಧಿಸಿ ಕೋರ್ಟ್ ಮೊರೆ ಹೋಗುತ್ತೇವೆ: ನಿವೃತ್ತ ಯೋಧರು

ಒಆರ್ ಒಪಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ಏಕ ಸದಸ್ಯ ಸಮಿತಿಯನ್ನು ನಿವೃತ್ತ ಯೋಧರು ವಿರೋಧಿಸಿದ್ದು, ಸಮಿತಿ ರಚನೆಯ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ.

ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್(ಒಆರ್ ಒಪಿ) ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ಏಕ ಸದಸ್ಯ ಸಮಿತಿಯನ್ನು ನಿವೃತ್ತ ಯೋಧರು ವಿರೋಧಿಸಿದ್ದು, ಸಮಿತಿ ರಚನೆಯ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ.
ಯೋಜನೆಗೆ ಸಂಬಂಧಿಸಿದ ಕೆಲವು ಗೊಂದಲಗಳನ್ನು ಕೇಂದ್ರ ಸರ್ಕಾರವೇ ಬಗೆಹರಿಸಬಹುದು, ಆದರೆ ಇದಕ್ಕಾಗಿ ರಚಿಸಲಾಗಿರುವ ಪ್ರತ್ಯೇಕ ಸಮಿತಿಯನ್ನು ನಾವು ಒಪ್ಪುವುದಿಲ್ಲ, ಕೇಂದ್ರ ಸರ್ಕಾರದ ನಿರ್ಧಾರ ವಿರುದ್ಧ ನಾವು ಕೋರ್ಟ್ ಮೆಟ್ಟಿಲೇರಬೇಕಾಗುತ್ತದೆ ಎಂದು ಒಆರ್ ಒಪಿ ಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ನಿವೃತ್ತ ಯೋಧ ಕರ್ನಲ್ ಅನಿಲ್ ಕೌಲ್ ಎಚ್ಚರಿಸಿದ್ದಾರೆ. 
"ಯೋಜನೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ನೆರವಾಗುವುದಕ್ಕೆ ಸಮಿತಿ ರಚಿಸುತ್ತೀರಿ, ಸಮಿತಿಯ ಕೆಲಸವನ್ನು ಸರ್ಕಾರವೇ ಮಾಡಬಹುದು" ಎಂದು ಕೌಲ್ ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರ ಸರ್ಕಾರ ಸಮಿತಿ ರಚನೆ ಮಾಡಿರುವುದರ ಬಗ್ಗೆ ಶೀಘ್ರವೇ ಐಇಎಸ್ಎಂ ಆಡಳಿತ ಮಂಡಳಿ ಸಭೆ ಕರೆಯುವುದಾಗಿ ಕೌಲ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಒಆರ್ ಒಪಿ ಯೋಜನೆ ದೋಷಪೂರಿತವಾಗಿದೆ ಎಂದು ನಿವೃತ್ತ ಯೋಧರು ಆರೋಪಿಸಿದ್ದಾರೆ. ದೋಷಗಳನ್ನು ಸರಿಪಡಿಸುವುದಕ್ಕಾಗಿ ಕೇಂದ್ರ ಸರ್ಕಾರ ಸೆ.5 ರಂದು ಏಕ ಸದಸ್ಯ ನ್ಯಾಯಾಂಗ ಸಮಿತಿಯನ್ನು ರಚನೆ ಮಾಡಿತ್ತು. ಏಕ ಸದಸ್ಯ ಸಮಿತಿ ಬದಲು ಕನಿಷ್ಠ ತ್ರಿಸದಸ್ಯ  ಸಮಿತಿಯನ್ನು ರಚಿಸಬೇಕು ಎಂದು ನಿವೃತ್ತ ಯೋಧರು ಪಟ್ಟು ಹಿಡಿದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT