ಸಾಂದರ್ಭಿಕ ಚಿತ್ರ 
ದೇಶ

ಲೋಕಸಭೆಯಲ್ಲಿ 'ಗಾಂಧಿಗಿರಿ': ಬಿಜೆಪಿಯಿಂದ ಪ್ರತಿಭಟನಾನಿರತ 'ಕೈ'ಗೆ ಗುಲಾಬಿ ಹೂವು

ಲೋಕಸಭೆಯಲ್ಲಿ ಪಂಜಾಬ್‌ನ ದಲಿತ ಯುವಕರ ಮೇಲಿನ ದೌರ್ಜನ್ಯ ಖಂಡಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಪಕ್ಷ ಕಾಂಗ್ರೆಸ್...

ನವದೆಹಲಿ: ಲೋಕಸಭೆಯಲ್ಲಿ ಪಂಜಾಬ್‌ನ ದಲಿತ ಯುವಕರ ಮೇಲಿನ ದೌರ್ಜನ್ಯ ಖಂಡಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರಿಗೆ ಆಡಳಿತರೂಢ ಬಿಜೆಪಿಯ ಕೆಲವು ಸದಸ್ಯರು ಗುಲಾಬಿ ಹೂವು ನೀಡಿ, ಅವರನ್ನು ಮನವೊಲಿಸುವ ಯತ್ನ ನಡೆಸಿದರು.

ಪಂಜಾಬ್ ದಲಿತ ಯುವಕರ ಮೇಲಿನ ದೌರ್ಜನ್ಯದ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಮತ್ತು ಪ್ರಶ್ನೋತ್ತರ ಅವಧಿಯನ್ನು ಮುಂದೂಡಬೇಕು ಎಂಬ ಕಾಂಗ್ರೆಸ್ ಮನವಿಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ತಿರಸ್ಕರಿಸಿದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹಾಗೂ ಪಂಜಾಬ್ ಎಸ್‌ಎಡಿ-ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಈ ವೇಳೆ ಆರು ಬಿಜೆಪಿ ಸಂಸದರು ಪ್ರತಿಭಟನಾ ನಿರತ ಕಾಂಗ್ರೆಸ್ ಸಂಸದರ ಬಳಿ ತೆರಳಿ ಗುಲಾಬಿ ಹೂವು ನೀಡಿ, ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು.

ದಲಿತ ವಿವಾದ ಪ್ರಮುಖ ವಿಷಯವಾಗಿದ್ದು, ನಮ್ಮ ಪಕ್ಷ ಈ ವಿಷಯ ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಲೋಕಸಭಾ ಕಾಂಗ್ರೆಸ್ ನಾಯಕ ಮಲಿಕಾರ್ಜುನ್ ಖರ್ಗೆ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT