ವೆಂಕಯ್ಯ ನಾಯ್ಡು 
ದೇಶ

ಪ್ರಧಾನಿ ಮೋದಿ ವಿರುದ್ಧ ಕೇಜ್ರಿವಾಲ್ ಪದ ಬಳಕೆ ಅಸಹ್ಯಕರ: ಬಿಜೆಪಿ

ಸಿಬಿಐ ಅಧಿಕಾರಿಗಳು ತಮ್ಮ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಸಿಬಿಐ ಅಧಿಕಾರಿಗಳು ತಮ್ಮ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪದ ಬಳಕೆ ಮಾಡಿರುವುದು ಅಸಹ್ಯಕರ ಎಂದು ಬಿಜೆಪಿ ಮುಖಂಡ ವಿಜೇಂದರ್ ಗುಪ್ತಾ ಹೇಳಿದ್ದಾರೆ.
ದೆಹಲಿಯಲ್ಲಿ ಏನೇ ನಡೆದರೂ ಅದಕ್ಕೆ ಕೇಂದ್ರ ಸರ್ಕಾರವನ್ನು ದೂಷಿಸುವುದು ಕೇಜ್ರಿವಾಲ್ ಅವರಿಗೆ ಫ್ಯಾಷನ್ ಆಗಿಬಿಟ್ಟಿದೆ. ಸಿಬಿಐ ಪ್ರಧಾನಿ  ಹಾಗೂ ಕೇಂದ್ರ ಸರ್ಕಾರ ಕೈಗೊಂಬೆಯಾಗಿಲ್ಲ. ಆಯಾ ಸಂಸ್ಥೆಗಳಿಗೆ ತಮ್ಮದೆ ಆದ ಅಧಿಕಾರವನ್ನು ನೀಡಿರುತ್ತೇವೆ. ಹೀಗಾಗಿ ಸಿಬಿಐ ಕಾರ್ಯಾಚರಣೆಯ ವಿವರಗಳನ್ನು ಕೇಂದ್ರ ಸರ್ಕಾರ ನೋಡಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಸಿಬಿಐ ದಾಳಿ ಕುರಿತಂತೆ ಕೇಜ್ರಿವಾಲ್, ರಾಜಕೀಯವಾಗಿ ನನ್ನನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಧ್ಯವಾಗಿಲ್ಲ. ಹೀಗಾಗಿ ಸಿಬಿಐ ದಾಳಿ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ. ಮೋದಿ ಓರ್ವ ಸೈಕೋಪಾತ್ ಎಂದು ಟ್ವೀಟಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT