ಸಾಂದರ್ಭಿಕ ಚಿತ್ರ 
ದೇಶ

ಸಹಜಸ್ಥಿತಿಗೆ ಮರಳುತ್ತಿರುವ ತಮಿಳುನಾಡು: ಶಾಲಾ ಕಾಲೇಜು ಪುನರಾರಂಭ

ಚಂಡಮಾರುತದ ಪ್ರಭಾವದಿಂದ ತೀವ್ರ ಹಾನಿಗೊಳಗಾಗಿದ್ದ ತಮಿಳುನಾಡಿನಲ್ಲಿ ಪರಿಸ್ಥಿತಿ ಮತ್ತು ಜನಜೀವನ ಸಹಜ ಸ್ಥಿತಿಯತ್ತ...

ಚೆನ್ನೈ: ಚಂಡಮಾರುತದ ಪ್ರಭಾವದಿಂದ ತೀವ್ರ ಹಾನಿಗೊಳಗಾಗಿದ್ದ ತಮಿಳುನಾಡಿನಲ್ಲಿ ಪರಿಸ್ಥಿತಿ ಮತ್ತು ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಚೆನ್ನೈ ಹಾಗೂ ನೆರೆಯ ಜಿಲ್ಲೆಗಳ ಶಾಲಾ ಕಾಲೇಜುಗಳು ಪುನರಾರಂಭಗೊಂಡಿವೆ.

ತಮಿಳುನಾಡಿನ ಕೆಲ ಜಿಲ್ಲೆಗಳಲ್ಲಿ ಒಂದೂವರೆ ತಿಂಗಳಿಂದ ಸತತ ಮಳೆ ಸುರಿಯುತ್ತಿತ್ತು. ಹೀಗಾಗಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತಿತರ ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದವು. ಅನೇಕ ಮಂದಿ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಇಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅಲ್ಲದೇ ವಿವಿಯ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಈ ನಡುವೆ ಕೆಲವು ಪ್ರದೇಶಗಳಲ್ಲಿ ಪ್ರವಾಹ ಸಂತ್ರಸ್ತರು ಇನ್ನೂ ಶಾಲಾ-ಕಾಲೇಜುಗಳ ಕೊಠಡಿಗಳಲ್ಲೇ ಉಳಿದುಕೊಂಡಿದ್ದಾರೆ. ಅಲ್ಲಿ ಮಾತ್ರ ಇನ್ನೂ ಶಾಲಾ ಕಾಲೇಜು ಆರಂಭವಾಗಿಲ್ಲ.

ಇದೇ ಸಂದರ್ಭದಲ್ಲಿ ಈ ತಿಂಗಳ 18ರಿಂದ 23 ರವರೆಗೆ ನಿಗದಿಯಾಗಿರುವ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳನ್ನು ಕನಿಷ್ಠ ಎರಡು ತಿಂಗಳು ಕಾಲ ಮುಂದೂಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಪ್ರಧಾನಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT