ಸಾಂದರ್ಭಿಕ ಚಿತ್ರ 
ದೇಶ

ಸಹಜಸ್ಥಿತಿಗೆ ಮರಳುತ್ತಿರುವ ತಮಿಳುನಾಡು: ಶಾಲಾ ಕಾಲೇಜು ಪುನರಾರಂಭ

ಚಂಡಮಾರುತದ ಪ್ರಭಾವದಿಂದ ತೀವ್ರ ಹಾನಿಗೊಳಗಾಗಿದ್ದ ತಮಿಳುನಾಡಿನಲ್ಲಿ ಪರಿಸ್ಥಿತಿ ಮತ್ತು ಜನಜೀವನ ಸಹಜ ಸ್ಥಿತಿಯತ್ತ...

ಚೆನ್ನೈ: ಚಂಡಮಾರುತದ ಪ್ರಭಾವದಿಂದ ತೀವ್ರ ಹಾನಿಗೊಳಗಾಗಿದ್ದ ತಮಿಳುನಾಡಿನಲ್ಲಿ ಪರಿಸ್ಥಿತಿ ಮತ್ತು ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಚೆನ್ನೈ ಹಾಗೂ ನೆರೆಯ ಜಿಲ್ಲೆಗಳ ಶಾಲಾ ಕಾಲೇಜುಗಳು ಪುನರಾರಂಭಗೊಂಡಿವೆ.

ತಮಿಳುನಾಡಿನ ಕೆಲ ಜಿಲ್ಲೆಗಳಲ್ಲಿ ಒಂದೂವರೆ ತಿಂಗಳಿಂದ ಸತತ ಮಳೆ ಸುರಿಯುತ್ತಿತ್ತು. ಹೀಗಾಗಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತಿತರ ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದವು. ಅನೇಕ ಮಂದಿ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಇಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅಲ್ಲದೇ ವಿವಿಯ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಈ ನಡುವೆ ಕೆಲವು ಪ್ರದೇಶಗಳಲ್ಲಿ ಪ್ರವಾಹ ಸಂತ್ರಸ್ತರು ಇನ್ನೂ ಶಾಲಾ-ಕಾಲೇಜುಗಳ ಕೊಠಡಿಗಳಲ್ಲೇ ಉಳಿದುಕೊಂಡಿದ್ದಾರೆ. ಅಲ್ಲಿ ಮಾತ್ರ ಇನ್ನೂ ಶಾಲಾ ಕಾಲೇಜು ಆರಂಭವಾಗಿಲ್ಲ.

ಇದೇ ಸಂದರ್ಭದಲ್ಲಿ ಈ ತಿಂಗಳ 18ರಿಂದ 23 ರವರೆಗೆ ನಿಗದಿಯಾಗಿರುವ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳನ್ನು ಕನಿಷ್ಠ ಎರಡು ತಿಂಗಳು ಕಾಲ ಮುಂದೂಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಪ್ರಧಾನಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT