ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಸಯೀದ್ ಶಾ ಗಿಲಾನಿ(ಸಂಗ್ರಹ ಚಿತ್ರ) 
ದೇಶ

ಸಕಾರಾತ್ಮಕ ದ್ವಿಪಕ್ಷೀಯ ಸಂಬಂಧದ ಬಗ್ಗೆ ಆತಂಕ: ಪಾಕ್ ರಾಯಭಾರ ಕಚೇರಿಯಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಸಭೆ

ಇತ್ತೀಚಿನ ದಿನಗಳಲ್ಲಿ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಸಕಾರಾತ್ಮಕ ದಿಕ್ಕಿನಲ್ಲಿ ನಡೆಯುತ್ತಿರುವ ಸೂಚನೆಗಳಿಂದ ಕಾಶ್ಮೀರಿ ಪ್ರತ್ಯೇಕತಾವಾದಿಗಳಲ್ಲಿ ಆತಂಕ ಮೂಡಿರುವುದು ಸ್ಪಷ್ಟವಾಗಿದೆ.

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಸಕಾರಾತ್ಮಕ ದಿಕ್ಕಿನಲ್ಲಿ ನಡೆಯುತ್ತಿರುವ ಸೂಚನೆಗಳಿಂದ ಕಾಶ್ಮೀರಿ ಪ್ರತ್ಯೇಕತಾವಾದಿಗಳಲ್ಲಿ ಆತಂಕ ಮೂಡಿರುವುದು ಸ್ಪಷ್ಟವಾಗಿದೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನದ ಭೇಟಿ ಬಗ್ಗೆ ಚರ್ಚಿಸಲು ಕಾಶ್ಮೀರಿ ಪ್ರತ್ಯೇಕತಾವಾದಿ ಹುರಿಯತ್ ಕಾನ್ಫರೆನ್ಸ್ ನ ನಾಯಕರು ಭಾರತದಲ್ಲಿರುವ ಪಾಕ್ ನ ರಾಯಭಾರಿ(ಹೈಕಮಿಷನರ್) ಅಬ್ದುಲ್ ಬಸಿತ್ ಅವರನ್ನು ಭೇಟಿ ಮಾಡಿದ್ದು, ದ್ವಿಪಕ್ಷೀಯ ಮಾತುಕತೆಯಲ್ಲಿ ಪ್ರಸ್ತಾಪವಾದ ಅಂಶಗಳ ಬಗ್ಗೆ ಚರ್ಚಿಸಿದ್ದಾರೆ.  ಪ್ರತ್ಯೇಕತಾವಾದಿಗಳಾದ ಪೀರ್ ಸೈಫುಲ್ಲಾ, ಅಲ್ತಫ್ ಅಹ್ಮದ್ ಶಾ, ಅಬ್ದುಲ್ ಬಸಿತ್ ಜೊತೆ ಸಭೆ ನಡೆಸಿದ್ದು, ಕಾಶ್ಮೀರ ವಿಷಯದಲ್ಲಿ ಪಾಕಿಸ್ತಾನ ತನ್ನ ಸ್ಥಿರತೆಯನ್ನು ಕಾಯ್ದುಕೊಳ್ಳಬೇಕು ಎಂದು ಹೇಳಿರುವ ಪ್ರತ್ಯೇಕತಾವಾದಿ ನಾಯಕ ಸಯೀದ್ ಅಲಿ ಗಿಲಾನಿ ಸಂದೇಶವನ್ನು ಪಾಕ್ ಹೈಕಮಿಷನರ್ ಗೆ ತಲುಪಿಸಿದ್ದಾರೆ.
ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯದ ಎದುರು ಪ್ರಮುಖ ವಿಷಯವನ್ನಾಗಿಸುವುದರಲ್ಲಿ ಅಬ್ದುಲ್ ಬಸಿತ್ ಪ್ರಮುಖ ಪಾತ್ರ ವಹಿಸಬೇಕೆಂದು ಕಾಶ್ಮೀರಿ ಪ್ರತ್ಯೆಕತಾವಾದಿಗಳು ಸಭೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT