ಅಣ್ಣಾ ಹಜಾರೆ 
ದೇಶ

ಕೇಜ್ರಿವಾಲ್ ತಮ್ಮ ಪ್ರಧಾನ ಕಾರ್ಯದರ್ಶಿಯ ಹಿನ್ನಲೆ ಪರೀಕ್ಷಿಸಬೇಕಿತ್ತು: ಹಜಾರೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಪ್ರಧಾನ ಕಾರ್ಯದರ್ಶಿಯ ರಾಜೇಂದ್ರ ಕುಮಾರ್ ಅವರ ಹಿನ್ನಲೆ...

ರಾಳೇಗಣ್‌ಸಿದ್ಧಿ (ಮಹಾರಾಷ್ಟ್ರ): ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಪ್ರಧಾನ ಕಾರ್ಯದರ್ಶಿಯ ರಾಜೇಂದ್ರ ಕುಮಾರ್ ಅವರ ಹಿನ್ನಲೆ ಪರೀಕ್ಷಿಸಬೇಕಿತ್ತು ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ಹೇಳಿದ್ದಾರೆ.

ದೆಹಲಿ ಸಿಎಂ ಕಚೇರಿ ಮೇಲಿನ ಸಿಬಿಐ ದಾಳಿಯ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅಣ್ಣಾ ಹಜಾರೆ ಅವರು, ಕೇಜ್ರಿವಾಲ್ ಅವರು ಈಗ ಕೇಂದ್ರದ ವಿರುದ್ಧ ಆರೋಪ ಮಾಡುವ ಬದಲು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ತಮ್ಮ ಪ್ರಧಾನ ಕಾರ್ಯದರ್ಶಿಯ ಹಿನ್ನಲೆ ಪರೀಕ್ಷಿಸಬೇಕಿತ್ತು ಎಂದಿದ್ದಾರೆ.

ಕೇಜ್ರಿವಾಲ್ ಅವರು ಯಾವತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾರೆ ಮತ್ತು ನಿಮ್ಮ ಸುತ್ತನಮುತ್ತ ಉತ್ತಮ ವ್ಯಕ್ತಿಗಳೇ ಇರುವಂತೆ ನೋಡಿಕೊಳ್ಳಿ ಎಂದು ನಾನು ಯಾವಾಗಲೂ ಹೇಳುತ್ತಿದ್ದೆ ಎಂದು ಹಿರಿಯ ಹೋರಾಟಗಾರ ತಿಳಿಸಿದ್ದಾರೆ.

ಇದೇ ವೇಳೆ ಸಿಬಿಐ ದಾಳಿ ಸಂಬಂಧ ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ ಅಣ್ಣಾ ಹಜಾರೆ, ಒಂದೂವರೆ ವರ್ಷಗಳ ಹಿಂದೆಯೇ ರಾಜೇಂದ್ರ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಈಗ ದಾಳಿ ಮಾಡಿದ್ದು ಏಕೆ? ಬಿಜೆಪಿ ಇಷ್ಟು ದಿನ ಏನು ಮಾಡುತ್ತಿತ್ತು? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT