ದೆಹಲಿ ಮೇಲೆ ದಾಳಿಗೆ ಸಂಚು: 2 ಜಿಹಾದಿಗಳ ಬಂಧನ (ಸಾಂದರ್ಭಿಕ ಚಿತ್ರ) 
ದೇಶ

ದೆಹಲಿ ಮೇಲೆ ದಾಳಿಗೆ ಸಂಚು: 2 ಜಿಹಾದಿಗಳ ಬಂಧನ

ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ರಾಜಧಾನಿ ದೆಹಲಿ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದರು ಎಂಬ ಆರೋಪದ ಮೇರೆಗೆ ಇಬ್ಬರು ಶಂಕಿತ ಬಿಹಾದಿಗಳನ್ನು ಬುಧವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ...

ನವದೆಹಲಿ: ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ರಾಜಧಾನಿ ದೆಹಲಿ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದರು ಎಂಬ ಆರೋಪದ ಮೇರೆಗೆ ಇಬ್ಬರು ಶಂಕಿತ ಬಿಹಾದಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಬುಧವಾರ ಎಂದು ತಿಳಿದುಬಂದಿದೆ.

ಬಂಧಿತರನ್ನು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಮೂಲದವರಾಗಿದ್ದಾರೆಂದು ಹೇಳಲಾಗುತ್ತಿದ್ದು, ದೆಹಲಿ ಪೊಲೀಸ್ ವಿಶೇಷ ದಳದ ಅಧಿಕಾರಿಗಳು ಇವರನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತ ವ್ಯಕ್ತಿಗಳು ಜಿಹಾದಿ ಸಂಘಟನೆಯ ಕಾರ್ಯಕರ್ತರಾಗಿದ್ದಾರೆಂದು ಶಂಕಿಸಲಾಗಿದೆ. ಆದರೆ, ಬಂಧಿತ ವ್ಯಕ್ತಿಗಳ ಹೆಸರು ಹಾಗೂ ಇನ್ನಿತರೆ ಮಾಹಿತಿಗಳನ್ನು ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.

ಉಗ್ರರ ಬೆದರಿಕೆ ಹಿನ್ನೆಲೆಯಲ್ಲಿ ಹಾಗೂ ಕೆಲವು ಉಗ್ರ ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರು ಉತ್ತರ ಪ್ರದೇಶದ ಹಲವೆಡೆ ಬೀಡುಬಿಟ್ಟಿದ್ದಾರೆಂಬ ಮಾಹಿತಿ ಮೇರೆಗೆ ವಿಶೇಷ ದಳದ ಅಧಿಕಾರಿಗಳು ಉತ್ತರಪ್ರದೇಶದಾದ್ಯಂತ ಕಾರ್ಯಾಚರಣೆಗಿಳಿದಿದ್ದರು. ಕಾರ್ಯಾಚರಣೆ ವೇಳೆಯಲ್ಲಿ ಇಬ್ಬರು ಶಂಕಿತ ಜಿಹಾದಿ ಸಂಘಟನೆಯ ಯುವಕರನ್ನು ಅಧಿಕಾರಿಗಳು ಇದೀಗ ಬಂಧನಕ್ಕೊಳಪಡಿಸಿದ್ದಾರೆ.

ಇದೀಗ ಬಂಧನಕ್ಕೊಳಕಾಗಿರುವ ಶಂಕಿತರು ಎರಡು ವರ್ಷಗಳ ಹಿಂದಷ್ಟೇ ಕಾಣೆಯಾಗಿದ್ದು, ಗಡಿ ದಾಟಿ ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನದ ತರಭೇತಿ ಕೇಂದ್ರಗಳಿಗೆ ಸೇರಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದೀಗ ಎರಡು ವರ್ಷಗಳ ಹಿಂದೆ ಕಾಣೆಯಾದ ವ್ಯಕ್ತಿಗಳು ಅಧಿಕಾರಿಗಳ ಕಣ್ಣಿಗೆ ಬಿದ್ದಿದ್ದು, ಹೊಸ ವರ್ಷಾಚರಣೆ ಹಾಗೂ ಕ್ರಿಸ್ ಮಸ್ ಹಬ್ಬದಂದು ದೆಹಲಿ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT