ನಿರ್ಭಯಾ ತಂದೆ 
ದೇಶ

ಮಗಳಿಗೆ ನ್ಯಾಯ ಒದಗಿಸಲು ನಾವು ಸೋತಿದ್ದೇವೆ: ನಿರ್ಭಯಾ ತಂದೆ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದಿಗೆ ಮೂರು ವರ್ಷ. ಮಗಳಿಗೆ ನ್ಯಾಯ ಕೊಡಿಸುವಲ್ಲಿ ನಾವು ಸೋತಿದ್ದೇವೆ....

ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದಿಗೆ ಮೂರು ವರ್ಷ. ಮಗಳಿಗೆ ನ್ಯಾಯ ಕೊಡಿಸುವಲ್ಲಿ ನಾವು ಸೋತಿದ್ದೇವೆ, ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಕಳೆದುಕೊಂಡಿದ್ದೇವೆ ಎಂದು ನಿರ್ಭಯಾ ತಂದೆ  ನೊಂದು ನುಡಿದಿದ್ದಾರೆ.

ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಬಾಲಾಪರಾಧಿಯನ್ನು ಬಿಡುಗಡೆ ಮಾಡದಂತೆ ಮನವಿ ಸಲ್ಲಿಸಿರುವುದಾಗಿ ಅವರು ಹೇಳಿದ್ದಾರೆ.

ಪ್ರತಿ ದಿನ ನಿರ್ಭಯಾ ನೆನಪು ನಮ್ಮನ್ನು ಕಾಡುತ್ತದೆ. ಅವಳ ನೆನಪಿನೊಂದಿಗೆ ಬದುಕುತ್ತಿದ್ದೇವೆ. ನಿರ್ಭಯಾ ಸಾವಿಗೆ ನಮ್ಮಿಂದ ಸೂಕ್ತ ನ್ಯಾಯ ಒದಗಿಸಲಿಲ್ಲವೆಂಬ ನೋವು ಕಾಡುತ್ತಿದೆ ಎಂದು 50 ವರ್ಷದ ನಿರ್ಭಯಾ ತಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಪ್ರಕರಣ ನಡೆದು ಮೂರು ವರ್ಷಗಳಾದರೂ ನಾಲ್ಕು ಅಪರಾಧಿಗಳನ್ನು ಗಲ್ಲಿಗೇರಿಸಿಲ್ಲ, ಆರು ಜನ ಅಪರಾಧಿಗಳಲ್ಲಿಯೇ ಬಾಲಾಪರಾಧಿ ಅತ್ಯಂತ ಕ್ರೂರಿಯಾಗಿದ್ದೂ, ಆತನನ್ನು ಡಿಸೆಂಬರ್ 20 ರಂದು ಆತನನ್ನು ಬಿಡುಗಡೆ ಗೊಳಿಸಲು ನ್ಯಾಯಾಲಯ ಆದೇಶಿಸಿದೆ. ಆತನನ್ನು ಬಿಡುಗಡೆ ಮಾಡಬಾರದು ಆತ ಸಮಾಜಕ್ಕೆ ಕಂಟಕ ಎಂದು ನಿರ್ಭಯಾ ತಂದೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT