ಚೇತನ್ ಚೌಹಾಣ್ 
ದೇಶ

ಜೇಟ್ಲಿ ವಿರುದ್ಧ ಆಪ್ ಆರೋಪ ತಳ್ಳಿ ಹಾಕಿದ ಡಿಡಿಸಿಎ

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಆಮ್ ಆದ್ಮಿ ಪಕ್ಷದ ಮುಖಂಡರು ಮಾಡಿರುವ ಆರೋಪವನ್ನು ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ತಳ್ಳಿ ಹಾಕಿದ್ದಾರೆ...

ಮುಂಬೈ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಆಮ್ ಆದ್ಮಿ ಪಕ್ಷದ ಮುಖಂಡರು ಮಾಡಿರುವ ಆರೋಪವನ್ನು ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ತಳ್ಳಿ ಹಾಕಿದ್ದಾರೆ. 
ದೆಹಲಿ ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ) ಪರ ಮಾತನಾಡಿರುವ ಚೇತನ್ ಚೌಹಣ್, ಆಪ್ ಮುಖಂಡರು ವಿನಾಃ ಕಾರಣ ಜೇಟ್ಲಿ ಅವರನ್ನು ಮಧ್ಯೆ ಎಳೆತರುತ್ತಿದ್ದಾರೆ. ಆಪ್ ಮುಖಂಡರು ಮಾಡಿರುವ 8 ಆರೋಪಗಳು ಸುಳ್ಳು. ಅವರ ಆರೋಪಗಳಲ್ಲಿ ಹುರುಳಿಲ್ಲ ಎಂದು ಹೇಳಿದ್ದಾರೆ. 
ಡಿಡಿಸಿಎ ವಿಶ್ವದರ್ಜೆಯ ಕ್ರೀಡಾಂಗಣವನ್ನು ನಿರ್ಮಿಸಿದೆ. ಸ್ಟೇಡಿಯಂ ನಿರ್ಮಾಣಕ್ಕೆ 114 ಕೋಟಿ ರು. ವೆಚ್ಚ ಮಾಡಲಾಗಿದೆ. ಪಿಚ್ ಹಾಗೂ ಹುಲ್ಲುಹಾಸಿಗೆ 57.24 ಕೋಟಿ ರುಪಾಯಿ. 
ಕ್ರೀಡಾಂಗಣದ ಕಟ್ಟಡಕ್ಕೆ 57 ಕೋಟಿ. 48 ಲಕ್ಷ ರುಪಾಯಿಯಲ್ಲಿ ಕ್ರೀಡಾಂಗಣಕ್ಕೆ ಎಸಿ ಅಳವಡಿಕೆ ಮಾಡಲಾಗಿದೆ ಎಂದು ಚೇತನ್ ಚೌಹಾಣ್ ಹೇಳಿದ್ದಾರೆ. 
ಡಿಡಿಸಿಎನಲ್ಲಿ ಹಣಕಾಸಿನ ವ್ಯವಹಾರ ನಡೆದಿಲ್ಲ. ಅಲ್ಲದೆ ಯಾವುದೇ ಕಾರ್ಯಗಳು ಪಾರದರ್ಶಕವಾಗಿ ನಡೆದಿದೆ. ಹೀಗಾಗಿ ಮುಚ್ಚಿಡುವ ಅವಕಾಶವಿಲ್ಲ ಎಂದಿರುವ ಅವರು ಆಪ್ ಮುಖಂಡರು ಮಾಡಿರುವ 8 ಆರೋಪಗಳಲ್ಲಿ ಹುರುಳಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT