ಆಪ್ ನಾಯಕರು ಸುದ್ದಿಗೋಷ್ಠಿ 
ದೇಶ

ಡಿಡಿಸಿಎ ಭ್ರಷ್ಟಾಚಾರದಲ್ಲಿ ಅರುಣ್ ಜೇಟ್ಲಿ ಭಾಗಿ: ಆಪ್ ಆರೋಪ

ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ಆರೋಪ ಮುಂದುವರೆಸಿರುವ ದೆಹಲಿ ಆಮ್ ಆದ್ಮಿ ಪಕ್ಷ, ಅರುಣ್ ಜೇಟ್ಲಿ ಡಿಡಿಸಿಎ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆಪ್ ನಾಯಕರು ಆರೋಪಿಸಿದ್ದಾರೆ.

ನವದೆಹಲಿ: ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ಆರೋಪ ಮುಂದುವರೆಸಿರುವ ದೆಹಲಿ ಆಮ್ ಆದ್ಮಿ ಪಕ್ಷ, ಅರುಣ್ ಜೇಟ್ಲಿ ಡಿಡಿಸಿಎ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆಪ್ ನಾಯಕರು ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆಪ್ ನಾಯಕರು, ಅರುಣ್ ಜೇಟ್ಲಿ ಡಿಡಿಸಿಎ ಅಧ್ಯಕ್ಷರಾಗಿದ್ದಾಗ ಭ್ರಷ್ಟಾಚಾರ ನಡೆದಿದ್ದು ಅರುಣ್ ಜೇಟ್ಲಿ ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು ಕೇಂದ್ರ ಸರ್ಕಾರ ಅರುಣ್ ಜೇಟ್ಲಿ ರಾಜೀನಾಮೆ ಪಡೆಯಬೇಕು ಎಂದು ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಆಗ್ರಹಿಸಿದ್ದಾರೆ.
ಅರುಣ್ ಜೇಟ್ಲಿ ಡಿಡಿಸಿಎ ಅಧ್ಯಕ್ಷರಾಗಿದ್ದಾಗ ಕ್ರಿಕೆಟ್ ಸಂಸ್ಥೆಯನ್ನು ಖಾಸಗಿ ಕ್ಲಬ್ ನಂತೆ ನಡೆಸುತ್ತಿದ್ದರು. ಜೇಟ್ಲಿ ಅಧ್ಯಕ್ಷರಾಗಿದ್ದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು 24 ಕೋಟಿ ರೂಪಾಯಿ ಬಜೆಟ್ ನ್ನು ಅನುಮೋದಿಸಲಾಗಿತ್ತು. ಆದರೆ ಸ್ಟೇಡಿಯಂ ನಿರ್ಮಾಣಕ್ಕೆ ಅನುಮೋದಿಸಲಾಗಿದ್ದ ವೆಚ್ಚಕ್ಕಿಂತ ಹೆಚ್ಚು ಖರ್ಚು ಮಾಡಲಾಗಿದ್ದು, ಒಟ್ಟು 114 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲಾಗಿದೆ ಎಂದು ಆಪ್ ನಾಯಕರು ಆರೋಪಿಸಿದಿದ್ದಾರೆ.
ಕೇಜ್ರಿವಾಲ್‌ ಅವರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಅವರ ಕಚೇರಿ ಮೇಲೆ ಸಿಬಿಐ ದಾಳಿ ನಡೆದಿದ್ದ ಹಿನ್ನೆಲೆಯಲ್ಲಿ ಆಪ್ ನಾಯಕರು ಅರುಣ್ ಜೇಟ್ಲಿ ಅವರನ್ನು ಗುರಿಯಾಗಿರಿಸಿಕೊಂಡು ವಾಗ್ದಾಳಿ ನಡೆಸುತ್ತಿದ್ದು, ಡಿಡಿಸಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಕಡತಗಳನ್ನು ಪಡೆಯಲು ಕೇಂದ್ರ ಸರ್ಕಾರ, ರಾಜೇಂದ್ರ ಕುಮಾರ್ ಕಚೇರಿ ಮೇಲೆ ದಾಳಿ ನಡೆಸಲಾಗಿದೆ ಎಂಬುದು ಆಪ್ ನಾಯಕರ ಆರೋಪವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!