ದೇಶ

ಕಪ್ಪುಹಣ : ಕೇಂದ್ರ ಸರ್ಕಾರದ ಕ್ರಮಗಳಿಗೆ ಯೋಗ ಗುರುರಾಮ್ ದೇವ್ ಅಸಮಾಧಾನ

Srinivas Rao BV

ಲಖನೌ: ವಿದೇಶದಲ್ಲಿರುವ ಕಪ್ಪುಹಣ ವಾಪಸ್ ತರಲು ಕೇಂದ್ರ ಸರ್ಕಾರದ ಕ್ರಮಗಳ ಬಗ್ಗೆ ಯೋಗ ಗುರು ಬಾಬಾ ರಾಮ್ ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲಖನೌ ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮ್ ದೇವ್, "ಕಪ್ಪುಹಣ ವಾಪಸ್ ತರುವ ವಿಷಯವನ್ನು ನಾವ್ಯಾರೂ ಮರೆತಿಲ್ಲ, ಈ ಬಗ್ಗೆ ಹಣಕಾಸು ಸಚಿವ ಅರುಣ್ ಜೇಟ್ಲಿ ಹಾಗೂ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದ್ದೇನೆ, ಪ್ರಧಾನಿ ಮೋದಿ ಕಪ್ಪುಹಣ ವಾಪಸ್ ತರಲಿದ್ದಾರೆ ಎಂಬ ಭರವಸೆ ಇದೆ, ಅದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಾಲಾವಕಾಶ ನೀಡಬೇಕು, ಶೀಘ್ರವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಕೇಜ್ರಿವಾಲ್ ಅವರ ಕಾರ್ಯದರ್ಶಿ ಕಚೇರಿ ಮೇಲೆ ದಾಳಿ ನಡೆದಿರುವ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ರಾಮ್ ದೇವ್, ಮುಖ್ಯಮಂತ್ರಿಯೊಬ್ಬರು ಕಳಂಕಿತ ಅಧಿಕಾರಿ ಬೆಂಬಲಕ್ಕೆ ನಿಂತಿರುವುದು ಇದೇ ಮೊದಲು, ಅರವಿಂದ್ ಕೇಜ್ರಿವಾಲ್  ಜೇಟ್ಲಿ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದು ವಿಷಾದನೀಯ ಎಂದು ಹೇಳಿದ್ದಾರೆ.

SCROLL FOR NEXT