ಅಮಾರ್ತ್ಯಸೇನ್ 
ದೇಶ

ಪಂಚಾಯತ್ ಚುನಾವಣೆಗೆ ಕನಿಷ್ಠ ವಿದ್ಯಾರ್ಹತೆ ಮಾನದಂಡವನ್ನು ಮರು ಪರಿಶೀಲಿಸಿ: ಅಮಾರ್ತ್ಯ ಸೇನ್

ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಿದ್ಯಾರ್ಹತೆ ನಿಗದಿಪಡಿಸಿರುವ ಹರ್ಯಾಣ ಸರ್ಕಾರದ ಆದೇಶವನ್ನು ಮರು ಪರಿಶೀಲಿಸಿಸಬೇಕಿದೆ ಎಂದು ಅಮಾರ್ತ್ಯಸೇನ್ ಹೇಳಿದ್ದಾರೆ.

ನವದೆಹಲಿ: ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಿದ್ಯಾರ್ಹತೆ ನಿಗದಿಪಡಿಸಿರುವ ಹರ್ಯಾಣ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ಇದರ ಬಗ್ಗೆ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ಮತ್ತೊಮ್ಮೆ ಅವಲೋಕನ ನಡೆಸಬೇಕಿದೆ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಅಮಾರ್ತ್ಯಸೇನ್ ಹೇಳಿದ್ದಾರೆ.
ಅವರ 'ದಿ ಕಂಟ್ರಿ ಆಫ್ ಫಸ್ಟ್ ಬಾಯ್ಸ್' ಕೃತಿ ಬಗ್ಗೆ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅಮಾರ್ತ್ಯ ಸೇನ್, ನಮ್ಮ ಉದ್ದೇಶಗಳು ಹಾಗೂ ದೇಶದ ಸ್ಥಿತಿಗಳ ವ್ಯತ್ಯಾಸಗಳನ್ನು ಗುರುತಿಸಬೇಕಿದೆ. ಎಲ್ಲರೂ ವಿದ್ಯಾವಂತರಾಗಿ ಎಲ್ಲರ ಮನೆಯಲ್ಲೂ ಶೌಚಾಲಯ ವ್ಯವಸ್ಥೆ ಬರುವವರೆಗೆ ಅವರ ಹಕ್ಕುಗಳನ್ನು ಕಸಿಯುವುದು ಸರಿಯಲ್ಲ, ಈಗಾಗಲೇ ಸಾಕಷ್ಟು ಕಳೆದುಕೊಂಡಿರುವ ವರ್ಗದ ಜನರ ಹಕ್ಕುಗಳನ್ನು ಕಸಿದುಕೊಳ್ಳುವುದು ಸರಿಯಲ್ಲ.  
ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಹರ್ಯಾಣ ಸರ್ಕಾರ ವಿಧಿಸಿರುವ ಕನಿಷ್ಠ ವಿದ್ಯಾರ್ಹತೆ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದರೂ, ಸಾಂವಿಧಾನಿಕ ಪೀಠ ಈ ಬಗ್ಗೆ ಮತ್ತೊಮ್ಮೆ ಅವಲೋಕನ ನಡೆಸಬೇಕೆಂದು ಸೇನ್ ಹೇಳಿದ್ದಾರೆ.
ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಇರುವ ಮಾನದಂಡಗಳ ಪೈಕಿ ಶೌಚಾಲಯ ಹೊಂದಿರುವುದು ಹಾಗೂ ಕನಿಷ್ಠ 10 ತರಗತಿ ತೇರ್ಗಡೆಯಾಗಿರುವುದನ್ನು ಸೇರಿಸಿ ಹರ್ಯಾಣ ಸರ್ಕಾರ ಸೆಪ್ಟೆಂಬರ್ ನಲ್ಲಿ ಮಸೂದೆ ಜಾರಿಗೊಳಿಸಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ಸಹ ಗ್ರೀನ್ ಸಿಗ್ನಲ್ ನೀಡಿತ್ತು. ಜನವರಿ 2016 ರಲ್ಲಿ ಹರ್ಯಾಣದಲ್ಲಿ ಪಂಚಾಯತ್ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT