ನ್ಯಾ. ಅರ್ಜನ್ ಕುಮಾರ್ ಸಿಕ್ರಿ (ಸಂಗ್ರಹ ಚಿತ್ರ) 
ದೇಶ

ಅಹಂಕಾರ ಬದಿಗಿರಿಸಿ ದೇಶದ ಅಭಿವೃದ್ಧಿಗೆ ಶ್ರಮಿಸಿ: ರಾಜಕೀಯ ಪಕ್ಷಗಳಿಗೆ ನ್ಯಾ.ಅರ್ಜನ್ ಸಿಕ್ರಿ ಕರೆ

ದೇಶದ ಅಭಿವೃದ್ಧಿಗಾಗಿ ರಾಜಕೀಯ ಪಕ್ಷಗಳು ಅಹಂಕಾರವನ್ನು ಬದಿಗಿರಿಸಬೇಕು ಎಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಅರ್ಜನ್ ಕುಮಾರ್ ಸಿಕ್ರಿ ಕರೆ ನೀಡಿದ್ದಾರೆ.

ನವದೆಹಲಿ: ದೇಶದ ಅಭಿವೃದ್ಧಿಗಾಗಿ ರಾಜಕೀಯ ಪಕ್ಷಗಳು ಅಹಂಕಾರವನ್ನು ಬದಿಗಿರಿಸಬೇಕು ಎಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಅರ್ಜನ್ ಕುಮಾರ್ ಸಿಕ್ರಿ ಕರೆ ನೀಡಿದ್ದಾರೆ.
ಎಲ್ಲಾ ರಾಜಕೀಯ ಪಕ್ಷಗಳು ಅಭಿವೃದ್ಧಿ ಪ್ರಧಾನ ರಾಜಕಾರಣ ಮಾಡಬೇಕಿದೆ. ಆದ್ದರಿಂದ ಅಹಂಕಾರ, ಸ್ವಾರ್ಥಗಳನ್ನು ಬಿಟ್ಟು ಒಗ್ಗಟ್ಟಿನಿಂದ ಅಭಿವೃದ್ಧಿಯೆಡೆಗೆ ಕೆಲಸ ಮಾಡಬೇಕಿದೆ, ಈ ನಿಟ್ಟಿನಲ್ಲಿ ಕೆಲಸ ಮಾಡಲು ಕೌಶಲ್ಯತೆ ಮುಖ್ಯವಾಗುತ್ತದೆ ಎಂದು ಅರ್ಜನ್ ಸಿಕ್ರಿ ಅಭಿಪ್ರಾಯಪಟ್ಟಿದ್ದಾರೆ. ಜಿ ಎಸ್ ಟಿ ಮಸೂದೆಗಳಂತಹ ಮಸೂದೆಗಳನ್ನು ಸಂಸತ್ ನಲ್ಲಿ ಅಂಗೀಕರಿಸಲು ಎಲ್ಲಾ ರಾಜಕೀಯ ಪಕ್ಷಗಳನ್ನು ಮನವೊಲಿಸಬೇಕಿದ್ದು, ಅಹಂಕಾರ ಬಿದಿಗಿಟ್ಟು ರಾಜಕೀಯ ಪಕ್ಷಗಳೂ ದೇಶದ ಅಭಿವೃದ್ಧಿಗೆ ಸಹಕರಿಸಬೇಕಿದೆ ಎಂದಿದ್ದಾರೆ.
ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅರ್ಜನ್ ಸಿಕ್ರಿ, ಮಾತುಕತೆ ಮೂಲಕ ಎರಡು ದೇಶಗಳ ನಡುವಿನ ಸಮಸ್ಯೆಗಳೇ ಬಗೆಹರಿಯಬಹುದಾದರೆ ಎರಡು ರಾಜಕೀಯ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಏಕೆ ಸಾಧ್ಯವಿಲ್ಲ? ಎಂದು ಪ್ರಶ್ನಿಸಿದ್ದಾರೆ.
ದೇಶದ ಅಭಿವೃದ್ಧಿಗಾಗಿ ರಾಜಕೀಯ ಪಕ್ಷಗಳು ಕನಿಷ್ಠ ಸಾಮಾನ್ಯ ಯೋಜನೆ ಚೌಕಟ್ಟನ್ನು ವಿಧಿಸಿಕೊಂಡು ಅದರ ಅಡಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ, ಇಂತಹ ನಿರ್ಧಾರಗಳು ಜಿಎಸ್ ಟಿ ಮಸೂದೆ ಅಂಗೀಕಾರಕ್ಕೂ ಅತ್ಯಗತ್ಯವಾಗಿದೆ ಎಂದು ಸಿಕ್ರಿ ಅಭಿಪ್ರಾಯಪಟ್ಟಿದ್ದಾರೆ. ಸಂಸತ್ ಅಧಿವೇಶನದಲ್ಲಿ ವಿರೋಧಪಕ್ಷದ ಸದಸ್ಯರಿಂದ ನಿರಂತರ ಗದ್ದಲದಿಂದಾಗಿ ಕಲಾಪ ವ್ಯರ್ಥವಾಗುತ್ತಿದ್ದು, ಜಿಎಸ್ ಟಿ ಮಸೂದೆ ಸೇರಿದಂತೆ ಹಲವು ಮಸೂದೆಗಳು ಅಂಗೀಕಾರವಾಗದೇ ಹಾಗೆಯೇ ಉಳಿದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT